ದೆಹಲಿಗೆ ಹೋಗುವ ಮುನ್ನ ಸಿಎಂ, ಡಿಸಿಎಂ ಮೀಟಿಂಗ್

Public TV
1 Min Read

ಬೆಂಗಳೂರು: ಏಪ್ರಿಲ್ ಮೊದಲ ವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ದೆಹಲಿಗೆ ಹೋಗುವ ಹಿನ್ನಲೆಯಲ್ಲಿ ಇಬ್ಬರು ಇಂದು ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಏಪ್ರಿಲ್ 2 ರಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ದೆಹಲಿಗೆ ತೆರಳಲಿದ್ದಾರೆ. ಈ ಬಾರಿ ದೆಹಲಿ ಪ್ರವಾಸದಲ್ಲಿ ರಾಜ್ಯದಲ್ಲಿ ಖಾಲಿ‌ ಇರುವ ವಿಧಾನ ಪರಿಷತ್ ಸ್ಥಾನದ ಭರ್ತಿ ಸಂಬಂಧ ಹೈಕಮಾಂಡ್ (High Command) ಜೊತೆ ಮಾತುಕತೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಭಾರತದ ಅಭಿವೃದ್ಧಿಗೆ ಆರ್‌ಎಸ್‌ಎಸ್‌ ಕೊಡುಗೆ ಅಪಾರ: ಮೋದಿ ಬಣ್ಣನೆ

 

ಸಿಎಂ ಡಿಸಿಎಂ ಹಾಗೂ ಗೃಹ ಸಚಿವ ಪರಮೇಶ್ವರ್ (Parameshwar) ಮಾತುಕತೆ ನಡೆಸಿದ್ದು,  ರಾಜಣ್ಣ (Rajanna) ಹನಿಟ್ರ್ಯಾಪ್‌ ಹಾಗೂ ರಾಜೇಂದ್ರ (Rajendra) ಸುಪಾರಿ ಕಿಲ್ಲಿಂಗ್ ಆರೋಪದ ಬಗ್ಗೆ ಚರ್ಚ ನಡೆಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‌ ಅಡಗುತಾಣಗಳ ಮೇಲೆ ಪಾಕ್‌ ಸೇನೆ ಡ್ರೋನ್‌ ದಾಳಿ – 11 ಜನರು ಸಾವು

Share This Article