ಚಿಕ್ಕಬಳ್ಳಾಪುರ: ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ, ನಮಗೆಲ್ಲಾ ಬಹಳ ದುಃಖ ಆಗಿದೆ. ಸಿಎಂ ಅಂತೂ ಬಹಳ ನೋವು ತಿಂದಿದ್ದಾರೆ ಎಂದು ಸಚಿವ ಎಂಸಿ ಸುಧಾಕರ್ (MC Sudhakar) ಹೇಳಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತದ (Chinnaswamy Stampede) ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ತನಿಖೆ ಮಾಡುತ್ತಿದೆ. ಸತ್ಯಾಸತ್ಯತೆ ಬಂದ ಮೇಲೆ ಖಂಡಿತ ಕ್ರಮ ತೆಗೆದುಕೊಳ್ಳುತ್ತಾರೆ. ಸತ್ತವರ ಜೀವ ತಂದುಕೊಡಲು ಸಾಧ್ಯ ಇಲ್ಲ, ಕುಟುಂಬ ಸದಸ್ಯರ ನೋವು ಮರೆಸಲು ಸಾಧ್ಯ ಇಲ್ಲ. ನನ್ನ ಕ್ಷೇತ್ರದಲ್ಲಿ ಇಬ್ಬರು ಹುಡುಗರ ಸಾವಾಗಿದೆ. ನನಗೂ ನೋವಾಗಿದೆ. ನಾನು ಸಹ ಕ್ರಿಕೆಟ್ ಆಟಗಾರ ಪ್ರೇಮಿ, ವಿಶ್ವಕಪ್ ಪಂದ್ಯ ಗೆದ್ದಾಗಲೂ ಈ ರೀತಿ ಸಂಭ್ರಮ ಇರುತ್ತಿರಲಿಲ್ಲ. ಆದರೆ ಪ್ರೀಮಿಯರ್ ಲೀಗ್ಗೆ ಜನ ಈ ರೀತಿ ಸಂಭ್ರಮ ಮಾಡುತ್ತಾರೆ. ಮೈಮರೀತಾರೆ ಅನ್ನೋದು ನಾನು ನೋಡಿಲ್ಲ. ಹಳ್ಳಿಗಳಲ್ಲಿ ಸಂಭ್ರಮ ಮನೆ ಮಾಡಿತ್ತು. ಐಪಿಎಲ್ ಆಪರೇಷನ್ ಸಿಂಧೂರದಿಂದ ಕೆಲ ಸಮಯ ವಿಳಂಬ ಆಯಿತು. ಹಾಗಾಗಿ ಆರ್ಸಿಬಿ (RCB) ಮ್ಯಾನೇಜ್ಮೆಂಟ್ ಆಟಗಾರರ ಕಮಿಟ್ಮೆಂಟ್ನಿಂದ ಸಂಭ್ರಮಾಚರಣೆ ತೀರ್ಮಾನ ಮಾಡಿದ್ದು ನಾವಲ್ಲ ಎಂದರು. ಇದನ್ನೂ ಓದಿ: 5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!
ಒಪನ್ ಪರೇಡ್ಗೆ ಬಿಟ್ಟಿಲ್ಲ ಅಂದಾಗ ವಿಪಕ್ಷದವರೇ ಕ್ರೀಡಾಭಿಮಾನಿಗಳ ವಿರೋಧಿ ಸರ್ಕಾರ ಎಂದು ಟ್ವೀಟ್ ಮಾಡಿದ್ದರು. ದುರ್ಘಟನೆ ಆದ ಕೂಡಲೇ ಬೇರೆ ರೀತಿ ಯಾಕೆ ಮಾತಾಡ್ತೀರಾ? ಅನಾಹುತ ಆಗಬಹುದು ಎಂದು ಸರ್ಕಾರದ ಗಮನಕ್ಕೂ ಇತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದು ನಮಗೆ ನಂಬಲು ಸಾಧ್ಯವಾಗುತ್ತಿಲ್ಲ. ಬಹಳ ಪಂದ್ಯಗಳು ನಡೆದಿವೆ, ಸಾವಿರಾರು ಜನ ಬಂದಿರೋ ಜಾಗ ಅದು. ಐದಾರು ಪಂದ್ಯಕ್ಕೆ ಬರುವ ಜನ ಒಂದೇ ಬಾರಿ ಬಂದಿದ್ದಾರೆ. ಹಾಗಂತ ನಾವು ಸಮರ್ಥನೆ ಮಾಡಿಕೊಳ್ಳಲು ಸಾಧ್ಯ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’
ಪಹಲ್ಗಾಮ್ ಘಟನೆ ಕುಂಭಮೇಳ ಘಟನೆಯನ್ನು ನಾವು ಟೀಕಿಸಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಶವಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೃತ ಪಟ್ಟವರ ಬಗ್ಗೆ ಬಿಜೆಪಿ, ಜೆಡಿಎಸ್ ಗೆ ಕರುಣೆ ಇಲ್ಲ. ಬಿಜೆಪಿ, ಜೆಡಿಎಸ್ ಶವಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಮೆಡ್-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ್ಯಾಂಕ್