ಸಿ.ಟಿ ರವಿ ಆ ಪದ ಬಳಸಿದ್ದು ಸತ್ಯ, ಇದು ಕ್ರಿಮಿನಲ್‌ ಅಪರಾಧ – ಸಿದ್ದರಾಮಯ್ಯ

Public TV
1 Min Read

ಕಲಬುರಗಿ: ಸದನದಲ್ಲಿ ಸಿ.ಟಿ ರವಿ, ಸಚಿವೆ ಹೆಬ್ಬಾಳ್ಕರ್‌ (Lakshmi Hebbalkar) ಬಗ್ಗೆ ಅವಾಚ್ಯ ಶದ್ಧ ಬಳಸಿದ್ದು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ ರವಿ (CT Ravi) ಆ ಪದ ಬಳಸಿದ್ದು ಸತ್ಯ. ಏಕೆಂದರೆ ಈ ಬಗ್ಗೆ ವಿಡಿಯೋ, ಆಡಿಯೋ ಕ್ಲಿಪಿಂಗ್ ಇವೆ ಎಂದು ತಿಳಿಸಿದರು. ಇದನ್ನೂ ಓದಿ: ಸಿ.ಟಿ ರವಿ ಫೇಕ್‌ ಎನ್‌ಕೌಂಟರ್‌ ಮಾಡಬೇಕೆಂಬ ವಿಚಾರ ಅಲ್ಲಿನ ಪೊಲೀಸ್‌ ತಂಡಕ್ಕೆ ಇತ್ತು ಅನಿಸುತ್ತೆ: ಜೋಶಿ ಬಾಂಬ್‌

ಎಂಎಲ್‌ಸಿ ಸಿ.ಟಿ ರವಿ ಪ್ರಕರಣವನ್ನ ನಮ್ಮ ಪೊಲೀಸರು ತನಿಖೆ (Police Investigation) ಮಾಡುತ್ತಿದ್ದಾರೆ. ಇದು ಕ್ರಿಮಿನಲ್‌ ಅಪರಾಧವಾಗಿದೆ. ಅಲ್ಲಿನ ಶಾಸಕರು, ಪರಿಷತ್‌ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ನ್ಯಾಯಾಂಗ ತನಿಖೆಗೆ ಕೇಳುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಕೊಡಗಿನಲ್ಲಿ ಭೀಕರ ಅಪಘಾತ – ಅರ್ಧಗಂಟೆ ಸ್ಟೇರಿಂಗ್‌ ಮಧ್ಯೆ ಸಿಲುಕಿದ್ದ ಚಾಲಕ, ಸ್ಥಿತಿ ಗಂಭೀರ!

ರಾಷ್ಟ್ರೀಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಈ ರೀತಿ ಪದ ಬಳಿಕೆ ಖಂಡನೀಯವಾಗಿದೆ ಎಂದು ಸಿಎಂ ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಆಕರ್ಷಣೀಯ ಪ್ರವಾಸಿ ತಾಣ – ತಾಜ್‌ಮಹಲ್‌ ಹಿಂದಿಕ್ಕಿ ಅಯೋಧ್ಯೆ ರಾಮಮಂದಿರ ನಂ.1

Share This Article