ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸಿಎಂ ಸೋಲ್ತಾರೆ- ಜನಾರ್ದನ ಪೂಜಾರಿ

Public TV
1 Min Read

ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಲಹೆಗಳನ್ನು ಕೊಟ್ಟಿದ್ದು ಹೌದು. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲ್ತಾರೆ ಎಂದಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ. ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ. ಇಲ್ಲಾಂದ್ರೆ ಸೋಲುತ್ತಾರೆ, ಸಲಹೆ ಕೊಟ್ಟಿದ್ದು ಕಾಂಗ್ರೆಸ್ ಉಳಿವಿಗೆ. ಆದರೆ, ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆದಾಗಿ ನಡೆಸಿದ್ದಾರೆ. ಮುಂದೇನು ಸಿದ್ರಾಮಯ್ಯರೇ ಸಿಎಂ ಆಗ್ತಾರೆ ಅಂತ ಹೇಳಿದ್ದಾರೆ.

ಇದೇ ವೇಳೆ ಜೆ.ಆರ್ ಲೋಬೋ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಲೋಬೋ ಬಂಟ ಸಮಾಜದ ವಿರೋಧಿಯೆಂದು ಹೇಳುತ್ತಿದ್ದಾರೆ. ಅಲೋಶಿಯಸ್ ಕಾಲೇಜು ರಸ್ತೆಗೆ ಸುಂದರರಾಮ್ ಶೆಟ್ಟಿ ಹೆಸರಿಡುವ ವಿಚಾರದಲ್ಲಿ ಬಂಟರನ್ನು ಎತ್ತಿಕಟ್ಟುತ್ತಿದ್ದಾರೆ. ಬಂಟರಿಗೆ ಕಾಂಗ್ರೆಸ್ಸಿನಲ್ಲಿ ಸಾಕಷ್ಟು ಅವಕಾಶ ನೀಡಲಾಗಿದೆ. ವಿಜಯಾ ಬ್ಯಾಂಕಿನಲ್ಲಿ ಎಷ್ಟು ಮಂದಿ ಬಂಟರು ಅಧ್ಯಕ್ಷರಾಗಿಲ್ಲ. ಇಂಥ ಅಪಪ್ರಚಾರ ಏನಿದ್ದರೂ ಲೋಬೋ ಈ ಬಾರಿ ಗೆಲ್ತಾರೆ. ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬರುತ್ತದೆ ಅಂತ ಅವರು ತಿಳಿಸಿದ್ರು.

ಪೂಜಾರಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಎದ್ದು ಹೋಗಿದ್ದು, ಹರೀಶ್ ಕುಮಾರ್ ವಿರುದ್ಧ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಹರೀಶ್ ಕುಮಾರ್ ಯಾಕೆ ಎದ್ದು ಹೋದ್ರು? ನನಗಿಂತ ಚಿದಂಬರಂ ಮುಖ್ಯ ಆಯ್ತಾ? ಚಿದಂಬರಂ ಚುನಾವಣಾ ಸಮಯದಲ್ಲಿ ಮಾತ್ರ ಬರ್ತಾರೆ. ಚಿದಂಬರಂ ಮಾಡಿದ್ದನ್ನು ಬಿಜೆಪಿಯವರು ಹೇಳಿದ್ರೆ ಕಾಂಗ್ರೆಸ್ ಸರ್ವನಾಶ ಆಗ್ಬಹುದು. ಚಿದಂಬರಂ ಏನೆಲ್ಲ ಮಾಡಿಟ್ಟಿದ್ದಾರೆ ನಿಮಗೆ ಗೊತ್ತಾ? ಹರೀಶ್ ಕುಮಾರ್ ಯಾಕೆ ಇಲ್ಲಿ ಆಟ ಆಡೋಕೆ ಬಂದಿದ್ದಾ ಅಂತ ತುಳು ಭಾಷೆಯಲ್ಲೇ ಕಾಂಗ್ರೆಸ್ ಮುಖಂಡರನ್ನು ಗದರಿಸಿದ್ರು.

https://www.youtube.com/watch?v=aZPVzgALjqk

Share This Article
Leave a Comment

Leave a Reply

Your email address will not be published. Required fields are marked *