ಡಿಕೆಶಿ ಮನೆಯಲ್ಲಿ ನಗನಾಣ್ಯ ಪತ್ತೆ: ಬಿಜೆಪಿ ಸೇರ್ಪಡೆ ಆಮಿಷ ಆರೋಪಕ್ಕೆ ಐಟಿ ಕೆಂಡಾಮಂಡಲ

Public TV
1 Min Read

ಬೆಂಗಳೂರು: ಐಟಿ ದಾಳಿ ಬಿಜೆಪಿ ಪ್ರೇರಿತ. ಇಂಧನ ಸಚಿವ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯಲು ದಾಳಿ ನಡೆದಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಆದಾಯ ತೆರಿಗೆ ಇಲಾಖೆ ಗರಂ ಆಗಿದೆ.

ಗುರುವಾರ ಸಂಜೆ ಕರ್ನಾಟಕ ಗೋವಾ ಪ್ರಾಂತ್ಯದ ಐಟಿ ಇಲಾಖೆ ಮಹಾನಿರ್ದೇಶಕರಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಿಎಂ ಆರೋಪವನ್ನು ಅಲ್ಲಗಳೆದಿದ್ದಾರೆ. ಐಟಿ ಅಧಿಕಾರಿಗಳಿಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಐಟಿ ಇಲಾಖೆ ವೃತ್ತಪರತೆ ಹೊಂದಿದ್ದು, ಮುಖ್ಯಮಂತ್ರಿ ಆರೋಪ ಸರಿಯಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಡಿಕೆಶಿ ಮನೆ ಮೇಲೆ ನಡೆದ ರೇಡ್‍ಗೆ ಸಂಬಂಧಿಸಿದಂತೆ ಮಹತ್ವದ ಸುಳಿವು ಕೂಡ ಬಿಟ್ಟುಕೊಟ್ಟಿದ್ದಾರೆ. ದಾಳಿ ವೇಳೆ, ನೂರಾರು ಕೋಟಿ ಅಘೋಷಿತ ಆಸ್ತಿ, ಚಿನ್ನಾಭರಣ ಪತ್ತೆಯಾಗಿರುವುದಾಗಿ ಮಾಧ್ಯಮ ಪ್ರಕಟಣೆ ತಿಳಿಸಲಾಗಿದೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?
ನಮ್ಮ ಐಟಿ ದಾಳಿಯನ್ನ ಕೆಲವು ರಾಜಕೀಯ ಮುಖಂಡರು ಕೆಲ ಆರೋಪಗಳನ್ನ ಮಾಡುತ್ತಿದ್ದಾರೆ. ಐಟಿ ದಾಳಿ, ಐಟಿ ಇಲಾಖೆ ರಾಜಕೀಯ ಪ್ರೇರಿತ ಎಂದು ಆರೋಪಗಳನ್ನ ಮಾಡಿದ್ದಾರೆ. ಆದರಲ್ಲೂ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿ, ಐಟಿ ಅಧಿಕಾರಿಗಳು ದಾಳಿ ವೇಳೆ ಸಚಿವರನ್ನು ಬಿಜೆಪಿಗೆ ಸೇರುವಂತೆ ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ನಾವು ಪ್ರಬಲವಾಗಿ ತಳ್ಳಿಹಾಕುತ್ತಿದ್ದೇವೆ. ಐಟಿ ಇಲಾಖೆ ವೃತ್ತಿಪರ, ರಾಜಕೀಯೇತರ ಇಲಾಖೆ. ದಾಳಿಯ ಸಂದರ್ಭದಲ್ಲಿ ನೂರಾರು ಕೋಟಿ ಅಘೋಷಿತ ಆಸ್ತಿ, ಚಿನ್ನಾಭರಣಗಳು ಪತ್ತೆಯಾಗಿವೆ. ಇದನ್ನು ದಾಳಿಯ ಸಂದರ್ಭದಲ್ಲಿ ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ನಿಮಗೆ ಆಹ್ವಾನ ಬಂದಿತ್ತಾ: ಡಿಕೆಶಿ ತಿಳಿಸಿದ್ದು ಹೀಗೆ

ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಪತ್ನಿ ಉಷಾಗೆ ಐಟಿ ಕೇಳಿದ ಪ್ರಶ್ನೆಗಳು ಏನು?

ಇದನ್ನೂ ಓದಿ: ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

ಇದನ್ನೂ ಓದಿ:  Exclusive: ಡಿಕೆ ಶಿವಕುಮಾರ್ ತಾಯಿ ಗೌರಮ್ಮಗೆ ಐಟಿ ಕೇಳಿದ ಪ್ರಶ್ನೆಗಳು ಏನು..?

ಇದನ್ನೂ ಓದಿ: ಡಿಕೆಶಿ ಮೇಲೆ ಐಟಿ ದಾಳಿಗೆ ಪ್ಲ್ಯಾನ್ ನಡೆದಿದ್ದು ಹೀಗೆ

 

 

 

Share This Article
Leave a Comment

Leave a Reply

Your email address will not be published. Required fields are marked *