ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರ ಅರ್ಚನೆ ಮಾಡಿಸಿದ ಸಿಎಂ

Public TV
1 Min Read

ಹಾಸನ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಂಗಳವಾರ) ಹಾಸನದ (Hassan) ಅದಿ ದೇವತೆ ಹಾಸನಾಂಬೆಯ (Hasanamba) ದರ್ಶನ ಪಡೆದಿದ್ದಾರೆ.

ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆ. ಈ ಬಾರಿ ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಅರ್ಚಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಅಪ್ಪು ಅಗಲಿಕೆಗೆ 3 ವರ್ಷ, ರಾಜ್ಯಾದ್ಯಂತ ಪುಣ್ಯಸ್ಮರಣೆ – ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರವಾಗಿದೆ. ಖಡ್ಗಮಾಲಾ ಸ್ತೋತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ ಎಂಬ ನಂಬಿಕೆ ಇದೆ. ಜೊತೆಗೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಇದು ಮುಕ್ತಿ ನೀಡುತ್ತದೆ ಎನ್ನುವ ನಂಬಿಕೆ ಇದೆ.

ಮುಡಾ ಹಗರಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಸಿಎಂ ತೊಂದರೆ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ವರ್ಷ ಮೂರು, ಮರೆಯದ ನೆನೆಪು ನೂರು: ಅಪ್ಪು ನೆನೆದ ರಾಘಣ್ಣ

Share This Article