ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB vs DC) ನಡುವಿನ ಐಪಿಎಲ್‌ ಪಂದ್ಯವನ್ನು ಸಿಎಂ ಸಿದ್ದರಾಮಯ್ಯ (Siddaramaiah) ವೀಕ್ಷಿಸಿದರು.

ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಬೈರತಿ ಸುರೇಶ್ ಜೊತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ (IPL 2025) ಪಂದ್ಯವನ್ನು ಸಿಎಂ ವೀಕ್ಷಸಿ ಎಂಜಾಯ್‌ ಮಾಡಿದರು. ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 163 ರನ್‌ ಗಳಿಸಿದೆ. ಫಿಲ್ ಸಾಲ್ಟ್ 37, ವಿರಾಟ್‌ ಕೊಹ್ಲಿ 22, ರಜತ್‌ ಪಾಟಿದಾರ್‌ 25, ಟಿಮ್‌ ಡೇವಿಡ್‌ 37, ಕೃಣಾಲ್‌ ಪಾಂಡೆ 18 ರನ್‌ ಗಳಿಸಿದ್ದಾರೆ.

ಡೆಲ್ಲಿ ಪರ ವಿಪ್ರಜ್ ನಿಗಮ್, ಕುಲ್ದೀಪ್‌ ಯಾದವ್‌ ತಲಾ 2 ಹಾಗೂ ಮುಕೇಶ್‌ ಕುಮಾರ್‌, ಮೋಹಿತ್‌ ಶರ್ಮಾ ತಲಾ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಚೆನ್ನೈ ತಂಡದಿಂದ ರುತುರಾಜ್‌ ಔಟ್‌ – ತಲಾ ಮತ್ತೆ ಕ್ಯಾಪ್ಟನ್‌

Share This Article