ಚಿಕ್ಕಮಗಳೂರು: ಕಾಫಿನಾಡಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಇತ್ತ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರು ಟೆಂಪಲ್ ರನ್ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರದಲ್ಲಿ (NR Pura) ಸಿಎಂ ಹಾಗೂ ಸಿಎಂ ಪತ್ನಿ ವಾಸ್ತವ್ಯ ಹೂಡಿದ್ದಾರೆ. ನಿನ್ನೆ (ಏ.12) ಮಧ್ಯಾಹ್ನ 3 ಗಂಟೆಗೆ ಪಾರ್ವತಿ ಅವರು ಹೊರನಾಡು (Horanadu) ಅನ್ನಪೂರ್ಣೇಶ್ವರಿ (Annapurneshwari Temple) ದರ್ಶನ ಪಡೆದಿದ್ದು, ಬಳಿಕ ಶೃಂಗೇರಿಗೆ (Sringeri) ತೆರಳಿ ಶಾರದಾಂಭೆಗೆ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ
ಪೂಜೆ ಬಳಿಕ ಶಾರದಾಂಬೆ ದೇಗುಲದ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಇತ್ತ ಸಿಎಂ ಎನ್.ಆರ್.ಪುರದ ಐಬಿಯಲ್ಲಿ ತಂಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ-ಶೃಂಗೇರಿ ತಾಲೂಕಿನಲ್ಲಿಂದು 38 ಕೋಟಿ ರೂ. ವೆಚ್ಚದ ಸೇತುವೆ ಹಾಗೂ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಸಿಎಂ ದಂಪತಿ ವಾಪಸ್ಸಾಗಲಿದ್ದಾರೆ.

