ಮೊದಲ ದಿನವೇ ಆಪ್ತನ ವಿರುದ್ಧ ಬಿಎಸ್‍ವೈ ಗರಂ

Public TV
1 Min Read

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಬಿ.ಎಸ್.ಯಡಿಯೂರಪ್ಪ ಅವರು ಆಪ್ತ ಸಹಾಯಕ ಸಂತೋಷ್ ವಿರುದ್ಧ ಗರಂ ಆಗಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ರಾಜಭವನದಿಂದ ತೆರಳುತ್ತಿದ್ದರು. ಈ ವೇಳೆ ನಮ್ಮ ಗಾಡಿ ಎಲ್ಲೋ? ಯಾಕೆ ಅಷ್ಟು ದೂರ ಕಾರನ್ನು ನಿಲ್ಲಿಸಿದ್ದಾನೆ ಎಂದು ಕೋಪದಿಂದಲೇ ಆಪ್ತ ಸಹಾಯಕ ಸಂತೋಷ್‍ನನ್ನು ಪ್ರಶ್ನಿದರು.

ಬಿಎಸ್‍ವೈ ಕೋಪವನ್ನು ಅರಿತ ಸಂತೋಷ್, ಕಾರು ಚಾಲಕ ತಿಂಡಿ ತಿನ್ನಲು ಹೋಗಿದ್ದಾನೆ ಎಂದು ತಿಳಿಸಿದರು. ಆಗ ಫುಲ್ ಗರಂ ಆದ ಬಿ.ಎಸ್.ಯಡಿಯೂರಪ್ಪ ಅವರು, ತಿಂಡಿ ತಿನ್ನೋಕೆ ಹೋಗು ಅಂತ ಹೇಳಿಬಿಡು ಎಂದು ಗುಡುಗಿದರು. ಈ ವೇಳೆ ಅಲ್ಲಿಗೆ ಬಂದಿದ್ದ ಮತ್ತೊಂದು ಕಾರನ್ನು ಹತ್ತಿ ಪ್ರಯಾಣ ಬೆಳೆಸಿದರು.

Share This Article
Leave a Comment

Leave a Reply

Your email address will not be published. Required fields are marked *