ಜನ್ಮದಿನದಂದೇ ಅದೃಷ್ಟದ ಮನೆಗೆ ಬಿಎಸ್‍ವೈ ಎಂಟ್ರಿ

Public TV
1 Min Read

-ಕಾವೇರಿಯಲ್ಲಿ ಸಿಎಂ ಗೃಹ ಪ್ರವೇಶ ಪೂಜೆ

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ತಮ್ಮ 78ನೇ ಹುಟ್ಟುಹಬ್ಬದಂದೇ ಅದೃಷ್ಟದ ಮನೆಗೆ ಕಾಲಿಡುತ್ತಿದ್ದಾರೆ. ಸರ್ಕಾರಿ ಬಂಗಲೆ ತಮ್ಮ ಅದೃಷ್ಟದ ಕಾವೇರಿ ನಿವಾಸಕ್ಕೆ ಯಡಿಯೂರಪ್ಪ ಅವರು ಪೂಜೆ ಮಾಡಿದ್ದಾರೆ.

ಯಡಿಯೂರಪ್ಪ ಅವರು ಇಂದು ಗೃಹಪ್ರವೇಶ ಪೂಜೆ ಮಾಡಿ ಕೆಲ ದಿನಗಳಲ್ಲಿ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಇಂದು ಮುಂಜಾನೆಯೇ ಬಿಎಸ್‍ವೈ ಹಾಗೂ ಅವರ ಕುಟುಂಬಸ್ಥರು ಗೃಹ ಪ್ರವೇಶ ಪೂಜೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಬಂದರು ಕಾವೇರಿ ನಿವಾಸದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಾಸವಿದ್ದರು. ಸಿದ್ದರಾಮಯ್ಯರ ಮನೆ ಖಾಲಿ ಮಾಡಿದ್ದು, ಇಂದು ಬಿಎಸ್ ವೈ ಕಾವೇರಿಗೆ ಎಂಟ್ರಿ ಕೊಟ್ಟಿದ್ದಾರೆ. ಲಕ್ಕಿ ಮನೆ ಎಂದು ಬಿಎಸ್‍ವೈ ಖುಷಿಖುಷಿಯಾಗಿ ಗೃಹ ಪ್ರವೇಶ ಪೂಜೆ ಮಾಡಿದ್ದಾರೆ.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಸಂಜೆ ಅರಮನೆ ಮೈದಾನದ ವೈಟ್‍ಪೆಟಲ್ಸ್ ಸಭಾಂಗಣದಲ್ಲಿ ಸಂಜೆ ಸಿಎಂಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಇನ್ನು ಯಾರೂ ಕೂಡ ಹಾರ-ತುರಾಯಿ, ಕಾಣಿಕೆಗಳನ್ನು ತರಬಾರದು ಎಂದು ಆಪ್ತೇಷ್ಠರಿಗೆ ಟ್ವಿಟರ್ ಮೂಲಕ ಸಿಎಂ ಮನವಿ ಮಾಡಿ, ನಿಮ್ಮ ಪ್ರೀತಿ ಸದಾ ಹೀಗೆಯೇ ಇರಲಿ ಅಭಿಮಾನಿಗಳಿಗೆ ಹೇಳಿದ್ದರು.

Share This Article
Leave a Comment

Leave a Reply

Your email address will not be published. Required fields are marked *