ಕಲ್ಲಿದ್ದಲು ಗಣಿ ಹರಾಜು- ಹೂಡಿಕೆದಾರರ ಆಕರ್ಷಣೆಗೆ ಜ.16ರಂದು ರಾಂಚಿಯಲ್ಲಿ ರೋಡ್ ಶೋ

Public TV
2 Min Read

– 8 ರಾಜ್ಯಗಳ 70 ಕಲ್ಲಿದ್ದಲು ಗಣಿಗಳ ಹರಾಜು ಪ್ರಕ್ರಿಯೆ

ಬೆಂಗಳೂರು: ಕಲ್ಲಿದ್ದಲು ಗಣಿ ಹರಾಜಿಗಾಗಿ (Coal Mine Auction) ಹೂಡಿಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಜನವರಿ 16ರಂದು ರಾಂಚಿಯಲ್ಲಿ (Ranchi) ರೋಡ್ ಶೋ (Road Show) ನಡೆಸಲಿದೆ.

ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ ಹೆಚ್ಚು ಹೆಚ್ಚು ಹೂಡಿಕೆದಾರರು ಭಾಗವಹಿಸುವಂತೆ ಸೆಳೆಯಲು ಕೇಂದ್ರ ಕಲ್ಲಿದ್ದಲು ಸಚಿವಾಲಯ ಜನವರಿ 16ರಂದು ರಾಂಚಿಯಲ್ಲಿ ರೋಡ್ ಶೋ ಆಯೋಜಿಸುತ್ತಿದೆ ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಮೊದಲು ಪಕ್ಷದ ನಾಯಕರಿಗೆ ನ್ಯಾಯ ಕೊಡಿಸಲಿ- ʼಕೈʼ ಯಾತ್ರೆಗೆ ಅಮಿತ್‌ ಮಾಳವಿಯಾ ವ್ಯಂಗ್ಯ

ರೋಡ್ ಶೋ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕಲ್ಲಿದ್ದಲು ಕಾರ್ಯದರ್ಶಿ ಅಮೃತ್ ಲಾಲ್ ಮೀನಾ, ಗೌರವ ಅತಿಥಿಯಾಗಿ ಹೆಚ್ಚುವರಿ ಕಾರ್ಯದರ್ಶಿ ಎಂ.ನಾಗರಾಜು ಭಾಗವಹಿಸಲಿದ್ದಾರೆ ಎಂದು ಕಲ್ಲಿದ್ದಲು ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ನಮ್ಮ ಎದೆ ಬಗೆದ್ರೆ ಶ್ರೀರಾಮ, ಸಿದ್ದರಾಮಯ್ಯ, ಅಂಬೇಡ್ಕರ್, ಸಿದ್ದಗಂಗಾ ಶ್ರೀಗಳೂ ಕಾಣ್ತಾರೆ: ಪ್ರದೀಪ್ ಈಶ್ವರ್

ಕಲ್ಲಿದ್ದಲು ಗಣಿಗಳ ವಾಣಿಜ್ಯ ಹರಾಜಿನಲ್ಲಿ 8 ಸುತ್ತುಗಳ ವಾಣಿಜ್ಯ ಹರಾಜುಗಳ ಅಡಿಯಲ್ಲಿ 39 ಕಲ್ಲಿದ್ದಲು ಗಣಿಗಳನ್ನು ಮತ್ತು 9ನೆಯ ಅಡಿಯಲ್ಲಿ 31 ಕಲ್ಲಿದ್ದಲು ಗಣಿಗಳನ್ನು ಮಾರಾಟ ಮಾಡಲು ಸರ್ಕಾರ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ 70 ಕಲ್ಲಿದ್ದಲು ಗಣಿಗಳು ಕಲ್ಲಿದ್ದಲು ಹೊಂದಿರುವ ರಾಜ್ಯಗಳಾದ ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಿಂದ ಬಂದಿವೆ. ಇದನ್ನೂ ಓದಿ: ಟ್ರಾಫಿಕ್ ರೂಲ್ಸ್ ಪಾಲಿಸದವರಿಗೆ ಚಿತ್ರಗುಪ್ತನ ಲೆಕ್ಕ, ಯಮನ ಪಾಠ!

ಈ ಗಣಿಗಳಲ್ಲಿ 27 ಸಂಪೂರ್ಣವಾಗಿ ಪರಿಶೋಧಿತವಾಗಿವೆ ಮತ್ತು 43 ಭಾಗಶಃ ಪರಿಶೋಧಿಸಲ್ಪಟ್ಟಿವೆ. ಏಳು ಕೋಕಿಂಗ್ ಕಲ್ಲಿದ್ದಲು ಗಣಿಗಳಾಗಿವೆ. ಆದರೆ ಉಳಿದವುಗಳು ಅಲ್ಲ ಎಂದು ಕೇಂದ್ರ ಗಣಿ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

ಸಮಗ್ರ ಚರ್ಚೆಯ ನಂತರ ಗಣಿಗಳನ್ನು ಮತ್ತು ಗಣಿ ಹರಾಜು ಪ್ರಕ್ರಿಯೆ ಅಂತಿಮಗೊಳಿಸಲಾಗಿದೆ ಮತ್ತು ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಅಭಯಾರಣ್ಯಗಳು, ನಿರ್ಣಾಯಕ ಆವಾಸ ಸ್ಥಾನಗಳು, ಶೇ.40ಕ್ಕಿಂತ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಮತ್ತು ಹೆಚ್ಚು ನಿರ್ಮಿಸಲಾದ ಪ್ರದೇಶವನ್ನು ಹೊರಗಿಡಲಾಗಿದೆ ಎಂದು ಕೇಂದ್ರ ಗಣಿ ಸಚಿವಲಯ ತಿಳಿಸಿದೆ. ಇದನ್ನೂ ಓದಿ: ರಾಮಮಂದಿರಕ್ಕೆ ಹೋಗಿ ಪಾಪ ತೊಳೆದುಕೊಂಡು ಬನ್ನಿ – ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

Share This Article