ಟಾಯ್ಲೆಟ್ ಬಾಗಿಲು ತೆರೆದಾಗ ಮನೆಯೊಡತಿಗೆ ಶಾಕ್ – ಬುಸುಗುಟ್ಟಿದ ನಾಗಪ್ಪ

Public TV
1 Min Read

ಶಿವಮೊಗ್ಗ: ಟಾಯ್ಲೆಟ್‍ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿ, ಮನೆಯವರು ಭಯಭೀತರಾದ ಘಟನೆ ಶಿವಮೊಗ್ಗ ನಗರದ ಶಿವಪ್ಪನಾಯಕ ಬಡಾವಣೆಯಲ್ಲಿ ನಡೆದಿದೆ.

ಶಿವಪ್ಪನಾಯಕ ಬಡಾವಣೆ ನಿವಾಸಿ ಶಬರಿ ಅವರು ಇಂದು ತಮ್ಮ ಮನೆಯ ಟಾಯ್ಲೆಟ್‍ಗೆ ಹೋದಾಗ, ಟಾಯ್ಲೆಟ್ ಪಿಟ್ ನಲ್ಲಿ ನಾಗರ ಹಾವು ಇರುವುದನ್ನು ಗಮನಿಸಿ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ತಕ್ಷಣ ಸ್ನೇಕ್ ಕಿರಣ್‍ಗೆ ಫೋನ್ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್, ನಾಗರ ಹಾವನ್ನು ಸುರಕ್ಷಿತವಾಗಿ ಪಿಟ್‍ನಿಂದ ತೆಗೆದು ಹೊರಗೆ ತಂದಿದ್ದಾರೆ. ಇದನ್ನೂ ಓದಿ: ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ – ಮನೆಯಲ್ಲಿದ್ದ 3 ಲಕ್ಷ ನಗದು, ಚಿನ್ನಾಭರಣ ಭಸ್ಮ

ಹಾವನ್ನು ಮನೆ ಹೊರಗೆ ತಂದ ಬಳಿಕ ಮನೆಯ ಒಡತಿ ನಾಗರ ಹಾವಿಗೆ ಆರತಿ ಬೆಳಗಿ, ಪೂಜೆ ಮಾಡಿದ್ದಾರೆ. ನಂತರ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ನಾಗಪ್ಪ ಮನೆಯಿಂದ ಹೊರ ಹೋದ ಬಳಿಕ ಶಬರಿ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ ಒಟ್ಟು 2,479 ಪ್ರಕರಣ – ಬೆಂಗ್ಳೂರಲ್ಲಿ 2,053 ಕೇಸ್

Share This Article
Leave a Comment

Leave a Reply

Your email address will not be published. Required fields are marked *