ಎಂಎಲ್‍ಸಿ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ -ಸಾರ್ವಜನಿಕರಿಗೆ ಹಂಚಲು ತಂದಿದ್ದ ಸೀರೆಗಳು ಪತ್ತೆ

Public TV
1 Min Read

ಹಾವೇರಿ: ವಿಧಾನಪರಿಷತ್ ಸದಸ್ಯ (MLC) ಆರ್.ಶಂಕರ್ ಅವರ ರಾಣೇಬೆನ್ನೂರಿನ (Ranebennur) ಬೀರಲಿಂಗೇಶ್ವರ ನಗರದ ಮನೆ ಮೇಲೆ ಮಂಗಳವಾರ ತಡರಾತ್ರಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು (Commercial Tax Department Officers) ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಗೃಹ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ಪತ್ತೆಯಾಗಿವೆ. ಶಂಕರ್ ಅವರ ಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ, ಶಾಲಾ ಹಾಗೂ ಪದವಿ ಕಾಲೇಜು (College) ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್‍ಗಳನ್ನು (School bag) ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದನ್ನೂ ಓದಿ: ಸಹಜ ಸ್ಥಿತಿಗೆ ಮರಳಿದ ದಶಪಥ ಹೈವೇ ಟೋಲ್

ಹಾವೇರಿ ಉಪವಿಭಾಗಧಿಕಾರಿ ದಾಖಲೆ ಪತ್ರ, ಬಿಲ್ ಮತ್ತು ಸ್ಟಾಕ್ ಚೆಕ್‍ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಕರ್, ಯಾರದ್ದೋ ಕುಮ್ಮಕ್ಕಿನಿಂದ ಈ ದಾಳಿ ನಡೆದಿದೆ. ನಾನು ದುಡಿದ ಹಣವನ್ನು ಸಮಾಜ ಸೇವೆಗೆ (Social service) ಬಳಕೆ ಮಾಡುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಗುರುವಾರ ರಾಜ್ಯಾದ್ಯಂತ 60 ಸಾವಿರ KPTCL ನೌಕರರಿಂದ ಮುಷ್ಕರ

Share This Article
Leave a Comment

Leave a Reply

Your email address will not be published. Required fields are marked *