ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಶರಣಾದ 10ರ ಬಾಲಕ

Public TV
0 Min Read

ಶಿವಮೊಗ್ಗ: ಕ್ಷಲ್ಲಕ ಕಾರಣಕ್ಕೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೀರ್ಥಹಳ್ಳಿ (Thirthahalli) ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಪ್ರೀತಮ್ (10) ಎಂದು ಗುರುತಿಸಲಾಗಿದೆ. ಪೋಷಕರು ಬೈದಿದ್ದಕ್ಕಾಗಿ ಬಾಲಕ, ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article