ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ದೂರು

Public TV
1 Min Read

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

ರಮೇಶ್‍ಬಾಬು ಬಂಡಿಸಿದ್ದೇಗೌಡ ನಾಮಪತ್ರದ ವೇಳೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಸರಿಯಾದ ಆಸ್ತಿ ಘೋಷಣೆ ಮಾಡಿಕೊಂಡಿಲ್ಲವೆಂದು ಆರೋಪಿಸಿ ಆರ್‍ಟಿಐ ಕಾರ್ಯಕರ್ತ ರವೀಂದ್ರ, ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: 10 ವರ್ಷದಿಂದ ಇಲ್ಲದವರು ಈಗ್ಯಾಕೆ ಬಂದ್ರಿ- ಗ್ರಾಮಸ್ಥರ ಸಿಟ್ಟಿಗೆ ಬೆದರಿ ಕಾಂಗ್ರೆಸ್ ಅಭ್ಯರ್ಥಿ ವಾಪಸ್

ರಮೇಶ್‍ಬಾಬು ಬಂಡಿಸಿದ್ದೇಗೌಡ ತಮ್ಮ ಹೆಸರಿನಲ್ಲಿ ಮಂಡ್ಯ ನಗರದಲ್ಲಿರುವ ಒಂದು ನಿವೇಶನ ಹಾಗೂ ತಮ್ಮ ಪತ್ನಿ ಸುಮತಿ ಹೆಸರಲ್ಲಿ ಕಿರಂಗೂರು ಗ್ರಾಮದ ಬಳಿ ಇರುವ 85 ನಿವೇಶನಗಳ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ಆಸ್ತಿ ವಿವರದ ಬಗ್ಗೆ ಮಾಹಿತಿ ಬಚ್ಚಿಟ್ಟಿರುವ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಿ, ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಆರ್‍ಟಿಐ ಕಾರ್ಯಕರ್ತ ರವೀಂದ್ರ ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *