ಪೊಲೀಸ್ ಅಕ್ರಮ ವರ್ಗಾವಣೆ – ಸಿಎಂ ಸೇರಿದಂತೆ 27 ಸಚಿವರ ವಿರುದ್ಧ ಲೋಕಾಯುಕ್ತಗೆ ದೂರು

Public TV
0 Min Read

ಬೆಂಗಳೂರು: ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆಯಲ್ಲಿ ಸಚಿವರ ಪಾತ್ರವಿರುವ ಬಗ್ಗೆ ಆರೋಪಿಸಿ ಲೋಕ್ತಾಯುಕ್ತಗೆ ದೂರು ಸಲ್ಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಸೇರಿದಂತೆ ಒಟ್ಟು 27 ಸಚಿವರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ಅಖಿಲ ಭಾರತ ಪೊಲೀಸ್ ಮಹಾಸಭಾ ಅಧ್ಯಕ್ಷರಾದ ಶಶಿಧರ್ ಲೋಕಾಯುಕ್ತಗೆ ದೂರು ನೀಡಿದ್ದು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮ ಎಸಗಿದ ಇವರ ವಿರುದ್ಧ ಕ್ರಮ ಕೈಗೊಳ್ಳುಬೇಕೆಂದು ಆಗ್ರಹಿಸಿದ್ದಾರೆ. ಹೈಕೋರ್ಟ್‍ನ ನಿರ್ದೇಶನದಂತೆ ದೂರು ನೀಡಿರುವುದಾಗಿ ಶಶಿಧರ್ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮದ ಬಗ್ಗೆ ದೂರುದಾರರು ಈ ಹಿಂದೆ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಹಾಕಿದ್ದರು. ಲೋಕಾಯುಕ್ತಕ್ಕೆ ದೂರು ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು.

Share This Article
Leave a Comment

Leave a Reply

Your email address will not be published. Required fields are marked *