ಕೋಟ್ಯಂತರ ರೂ. ಭ್ರಷ್ಟಾಚಾರ – ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಯಲ್ಲಿ ದೂರು

Public TV
1 Min Read

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಾಗಿದೆ.

ಕೃಷಿ ಇಲಾಖೆ ವತಿಯಿಂದ ರೈತರಿಗೆ ಕೊಡುವ ಯಂತ್ರೋಪಕರಣಗಳ ಟೆಂಡರ್ ನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆಂದು ಆರೋಪಿಸಿ ಖನಿಜ ಭವನದಲ್ಲಿರುವ ಎಸಿಬಿ ಕಚೇರಿಗೆ ಎಸಿಎಫ್ ಕರ್ನಾಟಕ ರಾಜ್ಯಾಧ್ಯಕ್ಷ ಕೃಷ್ಣ ಮೂರ್ತಿ ದೂರು ನೀಡಿದ್ದಾರೆ.  ಇದನ್ನೂ ಓದಿ: ಪ್ರೀತಿಸಿದ ಯುವತಿಯನ್ನು ದೂರ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ 

ಬಿ.ಸಿ. ಪಾಟೀಲ್ ಆಪ್ತ ನಿರ್ದೇಶಕ ದಿವಾಕರ್ ಮುಂದೆ ಇಟ್ಟುಕೊಂಡು ಸುಮಾರು 210 ಕೋಟಿಗೂ ಅಧಿಕ ಹಣ ಅಕ್ರಮ ಮಾಡಿದ್ದಾರೆ. ಕೂಡಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುವಂತೆ ಆಗ್ರಹಿಸಿ ದೂರು ನೀಡಲಾಗಿದೆ. ಇದನ್ನೂ ಓದಿ: ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ

ನಿರ್ದೇಶಕ ದಿವಾಕರ್ ಕೃಷಿ ಇಲಾಖೆಯಿಂದ ಸಬ್ಸಿಡಿ ರೂಪದಲ್ಲಿ ನೀಡುವ ವಸ್ತುಗಳಿಗೆ ಬಿಲ್ ಮಂಜೂರು ಮಾಡಲು ಲಂಚ ಪಡೆದಿದ್ದಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *