ಅಯ್ಯಪ್ಪ ಸ್ವಾಮಿ ಭಕ್ತಿ ಗೀತೆಗೆ ಅವಮಾನ- ಶಾಸಕ ಮೊಯ್ದೀನ್ ಬಾವಾ ವಿರುದ್ಧ ದೂರು ದಾಖಲು

Public TV
1 Min Read

ಮಂಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ ಭಕ್ತಿಗೀತೆ ಅನುಕರಿಸಿ ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿ ಹಿಂದೂಗಳ ಭಾವನೆ ದಕ್ಕೆ ಉಂಟು ಮಾಡಲಾಗಿದೆ ಎಂದು ಆರೋಪಿಸಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಂಬವರು ಶಾಸಕ ಬಾವಾ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?
ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆಯಾದ ಕಲ್ಲು ಮುಳ್ಳು ಶಬರಿಮಲೆಕ್ಕ್ ಎನ್ನುವ ಭಕ್ತಿಗೀತೆಯನ್ನೇ ಅನುಕರಿಸುವ ಮೊಯ್ದೀನ್ ಬಾವಾ ಅವರ ಹೆಸರಿನ ಮೇಲೆ ರಚಿಸಿದ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕ ಬಾವಾ ಅವರ ಮೇಲೆ ರಚಿತವಾದ ಈ ಹಾಡಲ್ಲಿ ಪ್ರಚಾರಕ್ಕಾಗಿ ಪ್ರಸಿದ್ಧ ಭಕ್ತಿಗೀತೆಯ ದಾಟಿಯಲ್ಲಿ ಅವರನ್ನು ಹೊಗಳಿ ರಚನೆ ಮಾಡಿರುವುದರಿಂದ ಹಿಂದೂಗಳ ಭಾವನೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ತುಳು ಭಾಷೆಯಲ್ಲಿ ಹಾಡು ರಚಿಸಲಾಗಿದ್ದು ಹಿಂದುಗಳ ಆಕ್ರೋಶ ಕಟ್ಟಿಕೊಳ್ಳುವಂತಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *