ಪರಿಮಳಾ ಲಾಡ್ಜ್ ಚಿತ್ರದ ವಿರುದ್ಧ ದೂರು

Public TV
1 Min Read

ಬೆಂಗಳೂರು: ಪರಿಮಳ ಲಾಡ್ಜ್ ಚಿತ್ರದ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಫಿಲ್ಮ್ ಚೇಂಬರ್ ಗೆ ಲಿಖಿತ ದೂರು ನೀಡಿದೆ.

ಈ ಚಿತ್ರದಲ್ಲಿ ಬಳಸಿದ ಅಶ್ಲೀಲ ಸಂಭಾಷಣೆ ತೆಗೆಯುವಂತೆ ದೂರಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಅಲ್ಲದೆ ಚಿತ್ರದ ಟೀಸರಿನಲ್ಲಿ ಇರುವ ಅಶ್ಲೀಲ ಸಂಭಾಷಣೆ ತೆಗೆಯದೇ ಇದಲ್ಲಿ ಫಿಲ್ಮಂ ಚೇಂಬರ್ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ದೂರಿನಲ್ಲಿ ಏನಿದೆ?
ವಿಜಯಪ್ರಸಾದ್ ನಿರ್ದೇಶನದ ಲೂಸ್ ಮಾದ, ನೀನಾಸಂ ಸತೀಶ್ ಹಾಗೂ ಸುಮನ್ ರಂಗನಾಥ್ ನಟನೆಯ ಪರಿಮಳ ಲಾಡ್ಜ್ ಎಂಬ ಹೆಸರಿನ ಈ ಚಿತ್ರದ ನಾಯಕ ನಟರ ಮೇಲೆ ಹಾಗೂ ನಿರ್ದೇಶಕ, ನಿರ್ಮಾಪಕ ಅವರ ಮೇಲೆ ಕ್ರಮಕೈಗೊಳ್ಳಲು ಒತ್ತಾಯ ಮಾಡುತ್ತಿದ್ದೇವೆ. ಹಾಗೆ ಈ ಚಿತ್ರದಲ್ಲಿ ಇರುವ ಅಶ್ಲೀಲ ಸಂಭಾಷಣೆ ತೆಗಿಸಬೇಕು ಇಲ್ಲವಾದರೆ ನಾವು ಕೋರ್ಟ್ ಮೊರೆ ಹೋಗಬೇಕಾಗುತ್ತದೆ. ಅದನ್ನು ಮೀರಿ ಇವರು ಈ ಚಿತ್ರವನ್ನು ಬಿಡುಗಡೆ ಮಾಡಿದ ಪಕ್ಷದಲ್ಲಿ ವಾಣಿಜ್ಯ ಮಂಡಳಿ ಮುಂದೆ ಹಾಗೂ ಈ ಚಲನಚಿತ್ರ ಪ್ರದರ್ಶನ ಮಾಡಲು ಚಿತ್ರಮಂದಿರದ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.

ಇತ್ತೀಚೆಗೆ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ನೀನಾಸಂ ಸತೀಶ್ ಹಾಗೂ ಲೂಸ್ ಮಾದ ಯೋಗಿ ಅವರಿಗೆ ಸಲಿಂಗಕಾಮಿಗಳು ಎಂಬ ಟೈಟಲ್ ನೀಡಲಾಗಿದೆ. ಅಲ್ಲದೇ ಚಿತ್ರದಲ್ಲಿ ನಟಿಸುತ್ತಿರುವ ಪ್ರತಿಯೊಬ್ಬರಿಗೂ ಒಂದೊಂದು ವಿಶೇಷ ಟೈಟಲ್ ನೀಡಿದೆ. ಈ ಸಿನಿಮಾದಲ್ಲಿ ಸುಮನ್ ರಂಗನಾಥ್, ದತ್ತಣ್ಣ, ಬುಲೆಟ್ ಪ್ರಕಾಶ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ.

Share This Article
Leave a Comment

Leave a Reply

Your email address will not be published. Required fields are marked *