ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ: ಪರಮೇಶ್ವರ್‌

Public TV
1 Min Read

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ (Congress Guarantee) ಯೋಜನೆಗಳಿಗೆ ಷರತ್ತುಗಳು (Condition) ಇರಲಿವೆ ಎಂದು ಹಿರಿಯ ನಾಯಕ ಪರಮೇಶ್ವರ್‌ (G. Parameshwara) ಹೇಳಿದ್ದಾರೆ.

ಗ್ರಾಮೀಣ ಭಾಗದ ಜನರು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್‌ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ(Cabinet) ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.  ಇದನ್ನೂ ಓದಿ: ನನ್ನ ಅಣ್ಣ ಬಹಳಷ್ಟು ಕಷ್ಟ ಪಟ್ಟಿದ್ದಾರೆ, ಅವ್ರೇ ಸಿಎಂ ಆಗ್ಬೇಕು: ಡಿಕೆ ಸುರೇಶ್

ಸಿಎಂ ಆಯ್ಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ, ದೆಹಲಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕುಳಿತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಜೊತೆ ಶಾಸಕರು ಹೋಗಿ ಶಕ್ತಿ ಪ್ರದರ್ಶನ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವು ಶಾಸಕರು ಅವರ ನಾಯಕರ ಜೊತೆ ಅಂತ ಹೋಗಿದ್ದಾರೆ. ಅದನ್ನ ಶಕ್ತಿ ಪ್ರದರ್ಶನ ಎಂದು ಹೇಳುವುದು ಸರಿಯಲ್ಲ ಎಂದು ಉತ್ತರಿಸಿದರು.

ಕಾಂಗ್ರೆಸ್‌ ನೀಡಿದ 5 ಗ್ಯಾರಂಟಿಗಳು ಯಾವುದು?
ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ., ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ, ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ.ಭತ್ಯೆ , ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿತ್ತು.

Share This Article