ಊರಿನ ಅಭಿವೃದ್ಧಿಗೆ ಏನ್ ಮಾಡಿದ್ದೀರಾ.. ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಗ್ರಾಮಸ್ಥರ ಮೇಲೆ ಹಲ್ಲೆ!

Public TV
1 Min Read

ಚಾಮರಾಜನಗರ: ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಚಾಮರಾಜನಗರದ ಜಿಲ್ಲೆಯ ಹನೂರು ಕ್ಷೇತ್ರದ ಕೌದಳ್ಳಿಯಲ್ಲಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಬೆಂಬಲಿಗರು ಗ್ರಾಮಕ್ಕೆ ಮತ ಕೇಳಲು ಬಂದಿದ್ದರು. ಈ ವೇಳೆ ಗ್ರಾಮಸ್ಥರು, ಅಭಿವೃದ್ಧಿ ಮಾಡದೇ ಮತ ಕೇಳಲು ಬಂದಿದ್ದೀರಾ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಚುನಾವಣೆ ಬಂದಾಗ ಮಾತ್ರ ಬರ್ತೀರಾ ಬೇರೆ ದಿನ ಎಲ್ಲಿಗೆ ಹೋಗಿರುತ್ತೀರಾ. ಗ್ರಾಮದ ಅಭಿವೃದ್ಧಿಗೆ ಏನು ಮಾಡಿದ್ದೀರಾ? ನಾವು ಯಾಕೆ ಮತ ಹಾಕಬೇಕು? ಅಂತ ಗ್ರಾಮಸ್ಥರು ಶಾಸಕನ ಬೆಂಬಲಿಗರಿಗೆ ಪ್ರಶ್ನೆ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನರೇಂದ್ರ ಹೋದಲ್ಲೆಲ್ಲಾ ಪ್ರಶ್ನೆಗಳನ್ನು ಕೇಳುವ ಮೂಲಕ ಗ್ರಾಮ ಪ್ರವೇಶಿಸಲು ಬಿಡಲಿಲ್ಲ. ಇದರಿಂದ ಕುಪಿತಗೊಂಡ ಶಾಸಕನ ಬೆಂಬಲಿಗರು ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಗ್ರಾಮಸ್ಥರು ಬೆಂಬಲಿಗರ ಕಾರಿನ ಮೇಲೆ ಕಲ್ಲು ಎಸೆಯುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *