ದೇವೇಗೌಡ್ರಿಗೇ ಮೋಸ ಮಾಡ್ದೋರು ಕುಮಾರಸ್ವಾಮಿನ ಬಿಡ್ತರಾ: ಸುರೇಶ್ ಅಂಗಡಿ

Public TV
1 Min Read

ಬೆಳಗಾವಿ: ಮಾಜಿ ಪ್ರಧಾನಿ ದೇವೇಗೌಡ ಅವರಿಗೇ ಮೋಸ ಮಾಡಿರುವ ಕಾಂಗ್ರೆಸ್ಸಿನವರು ಇನ್ನು ಕುಮಾರಸ್ವಾಮಿಯವರನ್ನು ಬಿಡುತ್ತಾರೆಯೇ ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಪ್ರಶ್ನಿಸಿದ್ದಾರೆ.

ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಹಾಗೂ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಸುದ್ದಿಗಾರರು ಸಿಎಂ ಸಿದ್ದರಾಮಯ್ಯನರ ಹೇಳಿಕೆ ಕುರಿತು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸುರೇಶ್, ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗುತ್ತೇನೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರದಲ್ಲಿ ಹೊಸದಾದ ಅಲೆಯನ್ನು ಎಬ್ಬಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರಿಗೇ ಮೋಸ ಮಾಡಿರುವ ಕಾಂಗ್ರೆಸ್ಸಿನವರು ಇನ್ನು ಕುಮಾರಸ್ವಾಮಿಯವರನ್ನು ಬಿಡುತ್ತಾರಾ. ಇನ್ನು ಕೆಲವೇ ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ರು.

ಈಗಾಗಲೇ ಸಮ್ಮಿಶ್ರ ಸರ್ಕಾರದಲ್ಲಿ ಹಗ್ಗ-ಜಗ್ಗಾಟ ಪ್ರಾರಂಭವಾಗಿದೆ. ಇವರಿಬ್ಬರ ಕಿತ್ತಾಟದಿಂದ ರಾಜ್ಯದಲ್ಲಿ ಯಾವುದೇ ಕೆಲಸ-ಕಾರ್ಯಗಳು ನಡೆಯುತ್ತಿಲ್ಲ. ಖುದ್ದು ಸಿದ್ದರಾಮಯ್ಯನವರೇ ಚಾಪೆ ಜಗ್ಗುವ ಕೆಲಸ ಮಾಡುತ್ತಿದ್ದಾರೆ. ಎರಡು ಪಕ್ಷಗಳ ಸಮ್ಮಿಶ್ರ ಮ್ಯಾರೇಜ್ ಯಾವಾಗ ಬೇಕಾದರೂ ಡೈವರ್ಸ್ ಆಗಬಹುದು. 15 ದಿನಗೊಳಗಾಗಿ ಈ ಸಮ್ಮಿಶ್ರ ಸರ್ಕಾರ ಪತನವಾಗಿ ನೂತನ ಸರ್ಕಾರಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *