ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ: ಕೆಸಿ ವೇಣುಗೋಪಾಲ್

Public TV
1 Min Read

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ ವಿರುದ್ಧ ಕಾಂಗ್ರೆಸ್ ಏಕಾಂಗಿಯಾಗಿ ಹೋರಾಡಲು ಸಾಧ್ಯವಿಲ್ಲ. ಮತ ವಿಭಜನೆ ತಡೆಯಲು ವಿಪಕ್ಷಗಳು ಒಟ್ಟಾಗುವುದು ಅನಿವಾರ್ಯ ಎಂದು ಕಾಂಗ್ರೆಸ್ (Congress) ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಎಲ್ಲಾ ಹಂತಗಳಲ್ಲಿ ಹೋರಾಡುತ್ತದೆ. ಆದರೆ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಸರ್ಕಾರದ ವಿರುದ್ಧ ಹೋರಾಡಲು ಎಲ್ಲಾ ಪ್ರತಿಪಕ್ಷಗಳ ನೆರವು ಅಗತ್ಯವಿದೆ. ಕಾಂಗ್ರೆಸ್ ಈ ಬಗ್ಗೆ ಉತ್ಸುಕವಿದೆ. ಕಳೆದ ಸಂಸತ್ ಅಧಿವೇಶನದಲ್ಲಿ ಅದಾನಿ ವಿರುದ್ಧದ ಹೋರಾಟದಲ್ಲಿ ಎಲ್ಲಾ ವಿಪಕ್ಷಗಳನ್ನು ಒಂದುಗೂಡಿಸುವ ಪ್ರಯತ್ನ ಮಾಡಿದೆ ಎಂದರು. ಇದನ್ನೂ ಓದಿ: ಫೆ. 27ಕ್ಕೆ ಬೆಳಗಾವಿಗೆ ಮೋದಿ ಭೇಟಿ

ದೇಶದಲ್ಲಿ ತುರ್ತು ಪರಿಸ್ಥಿತಿಯಂತಹ ಸನ್ನಿವೇಶ ನಿರ್ಮಾಣವಾಗಿದೆ. ಸರ್ವಾಧಿಕಾರಿ ಸರ್ಕಾರದ ವಿರುದ್ಧ ಹೋರಾಡುವ ದೊಡ್ಡ ನಿರ್ಧಾರ ಕಾಂಗ್ರೆಸ್ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದೆ. ಬಿಜೆಪಿಯನ್ನು ಅಧಿಕಾರದಿಂದ ಹೊರದಬ್ಬಲು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಚಿಂತನ ಶಿಬಿರದ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. 50 ವರ್ಷದೊಳಗಿನ ಪದಾಧಿಕಾರಿಗಳನ್ನು ನೇಮಕ ಮಾಡುವ ಕಾರ್ಯ ಆರಂಭಗೊಂಡಿದೆ. ಈ ಮೂಲಕ ಪಕ್ಷ ಯುವಕರಿಗೆ ಆದ್ಯತೆ ನೀಡುವ ಕೆಲಸ ಮಾಡುತ್ತಿದೆ ಇನ್ನು ಸ್ವಲ್ಪ ದಿನಗಳಲ್ಲಿ ಈ ಬದಲಾವಣೆ ನಾವು ಕಾಣಬಹುದು ಎಂದು ವೇಣುಗೋಪಾಲ್ ಹೇಳಿದ್ದಾರೆ. ಇದನ್ನೂ ಓದಿ: ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಲು ಸೂಚನೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *