ಜೆಡಿಎಸ್ ಜೊತೆ ಮೈತ್ರಿಗೆ ನಾವು ರೆಡಿ: ಸಿದ್ದರಾಮಯ್ಯ

Public TV
0 Min Read

ಬೆಂಗಳೂರು: ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೆಡಿಎಸ್‍ಗೆ ಬೆಂಬಲ ನೀಡುವುದಾಗಿ ಹೇಳಿದೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾರಿಗೂ ಬಹುಮತ ಬಾರದೇ ಇರುವ ಹಿನ್ನೆಲೆಯಲ್ಲಿ ನಾವು ಜೆಡಿಎಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು.

ಇತ್ತ ಬಿಜೆಪಿಯೂ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದು, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಜೆ.ಪಿ ನಡ್ಡಾ, ಧರ್ಮೇಂದ್ರ ಪ್ರಧಾನ್ ಇಂದು ಸಂಜೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಸೆಳೆಯುವ ಪ್ರಯತ್ನ ಮಾಡುತ್ತಿದ್ದರೂ ಜೆಡಿಎಸ್ ಕಡೆಯಿಂದ ಇದೂವರೆಗೂ ಯಾವುದೇ ಅಧಿಕೃತ ಹೇಳಿಕೆ ಪ್ರಕಟವಾಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *