ಅನರ್ಹ 14 ಶಾಸಕರನ್ನ ಉಚ್ಛಾಟಿಸಿದ ಎಐಸಿಸಿ

Public TV
1 Min Read

ಬೆಂಗಳೂರು: ಶಾಸಕ ಸ್ಥಾನದಿಂದ ಅನರ್ಹಗೊಂಡ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ಥಾನದಿಂದ 14 ಶಾಸಕರನ್ನು ಉಚ್ಛಾಟನೆ ಮಾಡಲಾಗಿದೆ.

ಕೆಪಿಸಿಸಿ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಅನರ್ಹಗೊಂಡ ಶಾಸಕರದ ಮಹೇಶ್ ಕುಮಟಳ್ಳಿ, ಶ್ರೀಮಂತ್ ಪಾಟೀಲ್, ರಮೇಶ್ ಜಾರಕಿಹೊಳಿ, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿಸಿ ಪಾಟೀಲ್, ಸುಧಾಕರ್, ಆನಂದ್ ಸಿಂಗ್, ಭೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್,  ಮುನಿರತ್ನ, ರೋಷನ್‍ ಬೇಗ್, ಎಂಟಿಬಿ ನಾಗರಾಜ್, ಆರ್ ಶಂಕರ್ ಅವರನ್ನು ಎಐಸಿಸಿ ಉಚ್ಛಾಟನೆ ಮಾಡಲಾಗಿದೆ.

ಶಾಸಕರ ಉಚ್ಛಾಟನೆ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಗಿದೆ. ತಕ್ಷಣದಿಂದಲೇ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅವರನ್ನು ಉಚ್ಛಾಟನೆ ಮಾಡಿರುವುದಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *