ಸ್ವಾಮೀಜಿಗಳು ಒತ್ತಡ ಹಾಕುವುದು ಸರಿಯಲ್ಲ: ದಿನೇಶ್ ಗುಂಡೂರಾವ್

Public TV
1 Min Read

ಬೆಂಗಳೂರು: ನಿನ್ನೆ ಹರಿಹರದಲ್ಲಿ ನಡೆದ ಪಂಚಮಸಾಲಿ ಸಮಾವೇಶದಲ್ಲಿ ವಚನಾನಂದ ಸ್ವಾಮೀಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಮಾತನಾಡಿದ್ದು ತಪ್ಪು. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಒಂದು ಸಮಾಜ ನಿಮ್ಮ ಕೈ ಬಿಡುತ್ತದೆ ಎಂದು ಸ್ವಾಮೀಜಿ ಹೇಳಬಾರದಿತ್ತು. ಸ್ವಾಮೀಜಿಗಳು ಆ ರೀತಿ ಒತ್ತಡ ಹಾಕುವುದು ಸರಿಯಲ್ಲ. ಸಹಜವಾಗಿ ಯಡಿಯೂರಪ್ಪ ಸ್ವಾಮೀಜಿ ಮಾತಿನಿಂದ ಕೆರಳಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಯಡಿಯೂರಪ್ಪನವರಿಗೆ ಎರಡೂ ಕಡೆಗಳಿಂದ ಒತ್ತಡವಿದೆ. ಒತ್ತಡದಿಂದಾಗಿಯೇ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸಿಎಂ ಆಗಿ ಇಷ್ಟು ತಿಂಗಳಾಯ್ತು. ಇಲ್ಲಿವರೆಗೆ ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಸಿಯೇ ಎಲ್ಲ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *