ಕಾಂಗ್ರೆಸ್ ಮುಖಂಡನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Public TV
1 Min Read

ಬೆಂಗಳೂರು: ಕಾಂಗ್ರೆಸ್ ಮುಖಂಡ ಮೇಲೆ ದುಷ್ಕರ್ಮಿಗಳ ಗ್ಯಾಂಗ್ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಸೋಮೇಶ್ವರ ನಗರದಲ್ಲಿ ನಡೆದಿದೆ.

ಸಿದ್ದಾಪುರ ನಿವಾಸಿ ಆಗಿರುವ ಸಯ್ಯದ್ ರಿಯಾಜ್ ಚಿಕ್ಕಪೇಟೆ ಕಾಂಗ್ರೆಸ್ ಕಮಿಟಿ ಕಾಯದರ್ಶಿಯಾಗಿದ್ದಾರೆ. ರಿಯಾಜ್ ಉಪಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಿಜ್ವಾನ್ ಪರ ಕೆಲಸ ಮಾಡಿ ಫಲಿತಾಂಶದ ಬಳಿಕ ಸಿದ್ದಾಪುರದ ಕಚೇರಿಗೆ ಬಂದಿದ್ದರು.

ರಿಜ್ವಾನ್ ಜಯದ ಸಂಭ್ರಮಾಚರಣೆ ಹುಡುಗರ ಬಳಿ ಹಂಚಿಕೊಳ್ಳಲು ರಿಯಾಜ್ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಡಿಯೋ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ರಿಯಾಜ್ ಮೇಲೆ ಮಚ್ಚು-ಲಾಂಗುಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಈ ಘಟನೆಯಲ್ಲಿ ತಲೆಯ ಭಾಗಕ್ಕೆ ಗಂಭೀರವಾಗಿ ಗಾಯಗೊಂಡಿರುವ ರಿಯಾಜ್ ಸೋಮೇಶ್ವರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನೆ ಸಂಬಂಧ ಪ್ರಕರಣ ದಾಖಲಿಸಿರುವ ಸಿದ್ದಾಪುರ ಪೊಲೀಸರು ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *