ನಜೀರ್ ಅಹ್ಮದ್ ನಿವಾಸದಲ್ಲಿ ‘ಕೈ’ ನಾಯಕರಿಗೆ ಭರ್ಜರಿ ಬಕ್ರೀದ್ ಬಾಡೂಟ

Public TV
1 Min Read

ಬೆಂಗಳೂರು: ಉತ್ತರ ಕರ್ನಾಟಕ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಿ ಜನರು ತುತ್ತು ಅನ್ನಕ್ಕಾಗಿ ಪರಡಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟ ಕೇಳ ಬೇಕಾದ ನಾಯಕರು ಹಬ್ಬದ ಸಂಭ್ರಮದಲ್ಲಿ ತೊಡಗಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ  ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರಿಗೆ ಆಹ್ವಾನವನ್ನು ನೀಡಿದ್ದು, ಹಬ್ಬದ ಸಂಭ್ರಮದಲ್ಲಿ ಭಾಗಹಿಸಿದ್ದ ನಾಯಕರು ಬಾಡೂಟ ಸವಿದಿದ್ದಾರೆ.

ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಇದ್ದರೂ ಕೂಡ ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿದ್ದ ಆ ಭಾಗದ ನಾಯಕರೇ ಇಂದು ನಜೀರ್ ಅಹ್ಮದ್ ಅವರ ನಿವಾಸದಲ್ಲಿ ನಡೆದ ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಬಿ ಪಾಟೀಲ್, ಮಹದೇವ ಪ್ರಸಾದ್, ಜಮೀರ್ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *