ಜೆಡಿಎಸ್ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡೋದು ಯಾಕೆ: ಕಾರಣ ತಿಳಿಸಿದ ಮಧು ಬಂಗಾರಪ್ಪ

Public TV
0 Min Read

ಶಿವಮೊಗ್ಗ: ಅಲ್ಪ ಸಂಖ್ಯಾತ, ಹಿಂದುಳಿದ ವರ್ಗಗಳ ಮತ ಜೆಡಿಎಸ್‍ಗೆ ಹೋಗುತ್ತದೆ ಎನ್ನುವ ಭಯದಿಂದ ಕಾಂಗ್ರೆಸ್ ನವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ಗೆ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸುವ ಅಗತ್ಯವಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪರ ಉತ್ತಮ ವಾತಾವರಣವಿದ್ದು ಅಧಿಕಾರಕ್ಕೆ ಬರುವುದು ಶತಸಿದ್ಧ. ಪ್ರಾದೇಶಿಕ ಪಕ್ಷಕ್ಕೆ ಈ ಬಾರಿ ಖಂಡಿತ ಅವಕಾಶ ಇದೆ ಎಂದು ಹೇಳಿದರು.

ಬಿಜೆಪಿಯೊಂದಿಗೆ ಮೈತ್ರಿ ಕುರಿತಂತೆ, ಕಾಂಗ್ರೆಸ್ ನವರ ಆರೋಪಕ್ಕೆ ದೇವೆಗೌಡರೇ ಸ್ಪಷ್ಟಪಡಿಸಿದ್ದಾರೆ. ಮೈತ್ರಿಗೆ ಮುಂದಾದರೆ ಕುಮಾರಸ್ವಾಮಿ ಅವರನ್ನು ಕುಟುಂಬದಿಂದಲೇ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ. ದೇವೇಗೌಡರಂತಹ ಹಿರಿಯರು ನೋವಿನಿಂದ ಈ ಮಾತು ಹೇಳಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *