ಪಾದಯಾತ್ರೆಗಾಗಿ ಮಾರ್ಗ ಸೂಚಿ ಬದಲಾವಣೆ ಮಾಡ್ತಿದ್ದಾರೆ: ನಾಗೇಂದ್ರ

Public TV
1 Min Read

ಬಳ್ಳಾರಿ: ಪಾದಯಾತ್ರೆ ಹತ್ತಿಕ್ಕಲು ಬಿಜೆಪಿ ಪ್ಲಾನ್ ಮಾಡಿದ್ದು, ಪಾದಯಾತ್ರೆಗಾಗಿ ಮಾರ್ಗ ಸೂಚಿ ಬದಲಾವಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ನಾಗೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಹತ್ತಿಕ್ಕಲು ಬಿಜೆಪಿ ಕುತಂತ್ರದಿಂದ ವೀಕೆಂಡ್ ಕಫ್ರ್ಯೂ ಮಾಡಿದೆ. ಮೆಕೆದಾಟು ನಿಲ್ಲಿಸಲು ಕುತಂತ್ರ ಮಾಡಿದೆ. ಪಾದಯಾತ್ರೆಗಾಗಿ ಮಾರ್ಗ ಸೂಚಿ ಬದಲಾವಣೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಪಕ್ಷ ಜಗ್ಗಲ್ಲ ಎಂದು ಹೇಳಿದ್ದಾರೆ.

ಮೇಕೆದಾಟು ಪೂರ್ವ ನಿರ್ಧರಿತ ಕಾರ್ಯಕ್ರಮ. ಇದು ಕಾಂಗ್ರೆಸ್ ಗೆ ವರವಾಗತ್ತೆ ಎಂದು ಬಿಜೆಪಿ ಕುತಂತ್ರ ಮಾಡುತ್ತಿದೆ. ಆದರೆ ಮೋದಿ ಲಕ್ಷಾಂತರ ಜನ ಸೇರಿಸಿ ಭಾಷಣ ಮಾಡುತ್ತಾರೆ. ರೈತರ ಪರ ಹೋರಾಟಕ್ಕೆ ಮಾತ್ರ ಬಿಜೆಪಿ ಕುತಂತ್ರ ಮಾಡಿದೆ ಎಂದು ಹೇಳಿದರು. ಇದನ್ನೂ ಓದಿಕೋವಿಡ್-19 ಹೊಸ ಮಾರ್ಗಸೂಚಿಗೆ ಬಿಜೆಪಿಯ ಸಚಿವ, ಶಾಸಕರಿಂದಲೇ ವಿರೋಧ

ರಾಜ್ಯದ ಹಿತದೃಷ್ಟಿಯಿಂದ ನೀರಿಗಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜ.9 ರಿಂದ 19ರವರೆಗೂ ಯಾತ್ರೆಯನ್ನು ಕಾಂಗ್ರೆಸ್ ಕೈಗೊಂಡಿದೆ. ಆದರೆ ಇದೀಗ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕುತ್ತಿದ್ದು, ಏನಾದ್ರು ಮಾಡಿ ಆದರೆ ನಾವು ನಿರ್ಧರಿಸಿರೋ ಪಾದಯಾತ್ರೆ ನಡೆಸಲು ಬದ್ಧರಾಗಿದ್ದೇವೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *