ಮಂಡ್ಯದಲ್ಲಿ ರೌಡಿಶೀಟರ್‌ಗೆ ಶಾಸಕರಿಂದ ಸನ್ಮಾನ

By
1 Min Read

ಮಂಡ್ಯ: ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕರು (Congress MLA)  ರೌಡಿಶೀಟರ್ ಗಳ ಪೋಷಣೆಗೆ ಮುಂದಾದ್ರಾ ಎಂಬ ಪ್ರಶ್ನೆ ಎದ್ದಿದೆ.

ಕೆಆರ್‍ಎಸ್‍ನಲ್ಲಿ ನೃತ್ಯ ಕಾರಂಜಿ ಉದ್ಘಾಟನೆ ವೇಳೆ ರೌಡಿಶೀಟರ್ ಕೂಡ ಆಗಿರುವ ಗ್ರಾಮಪಂಚಾಯತ್ ಸದಸ್ಯ ದೇವರಾಜ್ ಆಲಿಯಾಸ್ ಬುಲ್ಲಿಗೆ ವೇದಿಕೆಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ಸನ್ಮಾನ ಮಾಡಿದ್ದಾರೆ.

ಹಲವಾರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ದೇವರಾಜ್ ಹೆಸರು ಆಹ್ವಾನ ಪತ್ರಿಕೆಯಲ್ಲಿ ಇರಲಿಲ್ಲ. ಆದರೂ ವೇದಿಕೆಗೆ ರೌಡಿ ಶೀಟರ್ ನನ್ನು ಕರೆದು ಸಮ್ಮಾನಿಸಿದ್ದಾರೆ. ಈ ವೇಳೆ ಶಾಸಕರ ಕಾಲಿಗೆ ರೌಡಿಶೀಟರ್ ಬಿದ್ದಿದ್ದಾರೆ. ಈ ಕ್ಷಣಕ್ಕೆ ಸಚಿವ ಚಲುವರಾಯಸ್ವಾಮಿ ಕೂಡ ಸಾಕ್ಷಿ ಆಗಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ!

ಇತ್ತ ಶಾಸಕರು ಮಾತ್ರ ತಮ್ಮ ನಡೆಯನ್ನು ಸಮರ್ಥಿಸಿದ್ದಾರೆ. ನನ್ನ ಮೇಲೆಯೂ ಸಿಬಿಐ ಕೇಸ್ ಇದೆ. ಹಾಗಾದ್ರೆ ನಾನು ಕಾರ್ಯಕ್ರಮಕ್ಕೆ ಹೋಗಬಾರದು ಅಲ್ವಾ..? ಆಪಾದನೆ ಇದ್ದ ಮಾತ್ರಕ್ಕೆ ಅಪರಾಧಿ ಅಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್