ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುತ್ತಿರುವ 26 ಜನರ ಅರ್ಜಿ ನನ್ನ ಬಳಿಯಿದೆ: ಆರ್.ವಿ ದೇಶಪಾಂಡೆ

Public TV
1 Min Read

ಕಾರವಾರ: ಬಿಜೆಪಿಯಿಂದ ಕಾಂಗ್ರೆಸ್‌ಗೆ (Congress, BJP) ಬರಲು ಸಜ್ಜಾಗಿ 26 ಜನ ಅರ್ಜಿ ಹಾಕಿದ್ದಾರೆ. ಆ ಅರ್ಜಿಗಳೆಲ್ಲವೂ ನನ್ನ ಬಳಿಯಿದೆ. ಅವರೆಲ್ಲರೂ ಕಾಂಗ್ರೆಸ್‌ಗೆ ಬರೋದು ಖಚಿತ. ಸೂಕ್ತ ಸಮಯದಲ್ಲಿ ಯಾರು ಬರುತ್ತಾರೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ (RV Deshpande) ನುಡಿದಿದ್ದಾರೆ.

ಅಂಕೋಲದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಿ ಏನು ಮಾಡಬೇಕಿದೆ? ಬಿಜೆಪಿಗೆ ಸರ್ಕಾರ ನಡೆಸುವ ಶಕ್ತಿ ಇಲ್ಲ. ಅಲ್ಲಿಗೆ ಹೋಗಿ ಸರ್ಕಾರ ಮಾಡಲು ಸಾಧ್ಯವೇ? ಯಾರೂ ಹೋಗುವುದಿಲ್ಲ, ಕಾಂಗ್ರೆಸ್‌ ದಿನೇ ದಿನೇ ಬಲಿಷ್ಠವಾಗುತ್ತಿದೆ. ಅದಕ್ಕಾಗಿ ಬಿಜೆಪಿಯ ಪ್ರಮುಖ ನಾಯಕರೇ ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತನಾಡಿ, ಅದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ನಾನು ಶಾಸಕನಾಗಿ ಇದ್ದರೆ ತಪ್ಪಿಲ್ಲ, ಇಷ್ಟು ವರ್ಷ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ, ನಾನು ಸುಖವಾಗಿದ್ದೇನೆ. ನಾನು ಲೋಕಸಭೆಗೆ ಸ್ಪರ್ಧೆ ಸಹ ಮಾಡುವುದಿಲ್ಲ. ನನ್ನ ಮಕ್ಕಳು ಸಹ ಸ್ಪರ್ಧೆ ಮಾಡುವುದಿಲ್ಲ. ಸದ್ಯ ನಾನು ವಿಶ್ರಾಂತಿ ಕಣದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್