ಕೋಲಾರ: ಕಾಂಗ್ರೆಸ್ ಜೆಡಿಎಸ್ ಸಮನ್ವಯ ಸಮಿತಿಯ ಸಭೆ ಆರಂಭಗೊಳ್ಳುವ ಮುನ್ನವೇ ಚಿಂಚೋಳಿ ಕೈ ಶಾಸಕ ಉಮೇಶ್ ಜಾಧವ್ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.
ಕೋಲಾರದ ಶ್ರೀನಿವಾಸಪುರದಲ್ಲಿ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ನಾನು ಕಾಂಗ್ರೆಸ್ ಪಕ್ಷದಲ್ಲಿರಬೇಕು. ಇಲ್ಲವೇ ರಾಜೀನಾಮೆ ನೀಡಬೇಕು. ಈ ಎರಡರಲ್ಲಿ ಒಂದು ನಿರ್ಧಾರ ಕೈಗೊಳ್ಳುತ್ತೇನೆ ಉಮೇಶ್ ಜಾಧವ್ ತಿಳಿಸಿದ್ದರು.
ರಾಜೀನಾಮೆ ನೀಡುವ ವಿಚಾರದಲ್ಲಿ ಗೊಂದಲವಿದ್ದು, ಕ್ಷೇತ್ರದ ಮತದಾರರ ಸಲಹೆ ಪಡೆದು ಮುಂದುವರಿಯುತ್ತೇನೆ. ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ನೋಟಿಸ್ ತಲುಪಿದ ಮೇಲೆ ಉತ್ತರ ಕೊಡುತ್ತೇನೆ. ಸ್ಥಳೀಯವಾಗಿ ಕ್ಷೇತ್ರದಲ್ಲಿ ಸಮಸ್ಯೆಯಿಂದ ಅಸಮಾಧಾನವಿದೆ ಎಂದು ಹೇಳಿದ್ದರು.
ಬುಧವಾರ ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸಮಾವೇಶ ನಡೆಯಲಿದ್ದು, ಈ ವೇಳೆ ಅಧಿಕೃತವಾಗಿ ಜಾಧವ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಲೋಕಸಭಾ ಕಾಂಗ್ರೆಸ್ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಬಾರಿ ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಜಾಧವ್ ಅವರು ಖರ್ಗೆ ವಿರುದ್ಧ ಸ್ಪರ್ಧಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ಚಿಂಚೋಳಿ ಕೈ ಶಾಸಕ ಉಮೇಶ್ ಜಾಧವ್ ಕಣಕ್ಕೆ?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv