ಕರಾವಳಿಯ ಮೀನುಗಾರ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್

Public TV
1 Min Read

ಉಡುಪಿ: ಕರಾವಳಿಯ ಪ್ರಬಲ ಮತದಾರ ಸಮುದಾಯವಾದ ಮೀನುಗಾರರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಐಡಿಯಾ ಮಾಡಿದೆ.

ಕರಾವಳಿಯ ಪ್ರಬಲ ಮತದಾರ ಸಮುದಾಯವಾದ ಮೀನುಗಾರರನ್ನು ತನ್ನತ್ತ ಸೆಳೆಯಲು ರಾಹುಲ್ ಗಾಂಧಿ ಅವರನ್ನ ಕುಮಟಾಕ್ಕೆ ಕರೆತಂದು ಮೊಗವೀರರ ಬೃಹತ್ ಸಮಾವೇಶ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ನವೆಂಬರ್ 21 ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಣ್ಕಿಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕರ್ನಾಟಕ ಪ್ರದೇಶ ಮೀನುಗಾರ ಕಾಂಗ್ರೆಸ್ ಸಮಾವೇಶದ ಉಸ್ತುವಾರಿ ಹೊತ್ತುಕೊಂಡಿದೆ. ಉಡುಪಿಯಲ್ಲಿ ಮಾಜಿ ಶಾಸಕ ಯುಆರ್ ಸಭಾಪತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಒಂದು ಲಕ್ಷ ಮೀನುಗಾರರು ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಕೇಂದ್ರ ಸಂಪುಟದಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಮಂತ್ರಿ ಸ್ಥಾನ ಕೊಡಬೇಕು. ಮೀನುಗಾರರ ಸಮುದಾಯವನ್ನು ಎಸ್‍ಟಿ ಪಂಗಡಕ್ಕೆ ಸೇರಿಸಬೇಕು. ಹೀಗೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಸಮಾವೇಶದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಯುಆರ್ ಸಭಾಪತಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *