ಮೈತ್ರಿ ಬಗ್ಗೆ ಆಪ್ ಜೊತೆ ಮಾತುಕತೆ ನಡೆಸಿಲ್ಲ- ಕಾಂಗ್ರೆಸ್ ಸ್ಪಷ್ಟನೆ

Public TV
1 Min Read

ನವದೆಹಲಿ: 2019ರ ಲೋಕಸಭಾ ಚುನಾವಣೆ ಕುರಿತು ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಆಪ್ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಬಿಜೆಪಿ ಮತ್ತು ಮೋದಿ ಮೇಲೆ ಬರಲು ಅರವಿಂದ್ ಕೇಜ್ರಿವಾಲ್ ಮುಖ್ಯ ಕಾರಣ. ಕಾಂಗ್ರೆಸ್ ಪಕ್ಷವನ್ನು ತೆಗಳಿ ಮೋದಿಯನ್ನು ತೆರೆಗೆ ತಂದಿದ್ದು ಕೇಜ್ರಿವಾಲ್. ದೆಹಲಿ ಘಟಕದ ಕಾಂಗ್ರೆಸ್ ಅಧ್ಯಕ್ಷನಾಗಿ ನಾನು ಮತ್ತು ಇತರ ನಾಯಕರು ಹಾಗೂ ಕಾರ್ಯಕರ್ತರು ಕೇಜ್ರಿವಾಲ್ ರನ್ನು ಬೆಂಬಲಿಸುವುದಿಲ್ಲ. ಜನಗಳು ಕೂಡ ಬೆಂಬಲಿಸುತ್ತಿಲ್ಲ ಹಾಗಾಗಿ ನಾವು ಸಹ ಬೆಂಬಲಿಸುವುದಿಲ್ಲ ಎಂದು ಅಜಯ್ ಮಕೇನ್ ಟ್ವೀಟ್ ಮಾಡಿದ್ದಾರೆ.

2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರು ಆಪ್ ಪಕ್ಷದ ಜೊತೆ ಮಾತುಕತೆ ನಡೆಸಿದ್ದಾರೆ. ಮೇ 24 ರಂದು ಕಾಂಗ್ರೆಸ್ ನ ಜೈರಾಮ್ ರಮೇಶ್ ಮತ್ತು ಅಜಯ್ ಮಕೇನ್ ಆಪ್ ಜೊತೆ ಮಾತುಕತೆ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಅಜಯ್ ಮಕೇನ್ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ:ಲೋಕಸಭಾ ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್, ಆಪ್ ಮಾತುಕತೆ!

ಈಗಾಗಲೇ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಜೊತೆ ಲೋಕಸಭಾ ಚುನಾವಣೆಯನ್ನು ಎದುರಿಸಲು ಸನ್ನದ್ಧವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರಬಲವಾಗಿರುವ ಆಪ್ ಜೊತೆ ಕಾಂಗ್ರೆಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದವು. ಈ ಸಂಬಂಧ ಅಜಯ್ ಮಕೇನ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *