ಮೋದಿ ಭಾಷಣಕ್ಕೆ ಕಾಂಗ್ರೆಸ್ ಅಡ್ಡಿಪಡಿಸಿದರ ಹಿಂದಿದೆ ರಾಹುಲ್ ವಿನೂತನ ತಂತ್ರ!

Public TV
3 Min Read

ನವದೆಹಲಿ: ಸಂಸತ್ ನಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಕಾಂಗ್ರೆಸ್ ನಾಯಕರು ಅಡ್ಡಿಪಡಿಸಿ ಘೋಷಣೆ ಕೂಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

ಪ್ರಧಾನಿ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಕುರಿತಗಾಗಿ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾವಹಿಸಿ ಮಾತನಾಡುತ್ತಿದ್ದರು. ಈ ವೇಳೆ ಪ್ರಧಾನಿಗಳ ಭಾಷಣಕ್ಕೆ ಅಡ್ಡಿ ಪಡಿಸಲು ರಾಹುಲ್ ಗಾಂಧಿ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು `ಗೆರಿಲ್ಲಾ ಶೈಲಿ’ಯನ್ನು ಬಳಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ ಸಂಸದರಿಗೆ ಬುಧವಾರ ಮಾಧ್ಯಹ್ನ 12 ಗಂಟೆ ವೇಳೆಗೆ ಸದನದಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿತ್ತು. ಈ ಗೆರಿಲ್ಲಾ ತಂತ್ರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ತಂತ್ರಕ್ಕೆ ಸ್ವಲ್ಪ ಹಿಂಜರಿದಿದ್ದರು. ಆದರೆ ರಾಹುಲ್ ಈ ಕ್ರಮಕ್ಕೆ ಗ್ರಿನ್ ಸಿಗ್ನಲ್ ನೀಡಿದ್ದರು. ಇದರ ಉಸ್ತುವಾರಿಯನ್ನು ಕಾಂಗ್ರೆಸ್ ನ ಜ್ಯೋತಿ ಅದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ಸಂಸದರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ಹೊರಡಿಸಲಾಗಿದ್ದ ಪ್ಲೇ ಕಾರ್ಡ್‍ಗಳನ್ನು ಹಿಡಿದು ಘೋಷಣೆ ಕೂಗಿದ್ದರು. ಈ ವೇಳೆ ಯುಪಿಎ ಬೆಂಬಲಿತ ಪಕ್ಷಗಳ ಸದಸ್ಯರ ಸಹಕಾರವನ್ನು ಕಾಂಗ್ರೆಸ್ ಕೇಳಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.

ಘೋಷಣೆ ಕೂಗುವ ವೇಳೆ ಯಾವ ರೀತಿಯ ಘೋಷಣೆ ಕೂಗಬೇಕು ಎಂಬುದನ್ನು ರಾಹುಲ್ ಸೂಚಿಸಿದ್ದರು. ಈ ವೇಳೆ ವೈಯಕ್ತಿಕ ಅಂಶಗಳಿಗೆ ಅವಕಾಶವನ್ನು ನೀಡದೆ ವಿಷಯಾಧಾರಿತವಾದ ಘೋಷಣೆಗಳನ್ನು ಕೂಗಲು ತಿಳಿಸಿದ್ದರು ಎಂದು ಕಾಂಗ್ರೆಸ್ ಸಂಸದ ರಂಜಿತ್ ರಂಜನ್ ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದಂತೆ “ಬಂದ್ ಕರೋ.. ಬಂದ್ ಕರೋ, ನಾಟಕ್ ಬಂದ್ ಕರೋ” ಎಂದು ಕೂಗುವ ಮೂಲಕ ಮೋದಿ ಭಾಷಣಕ್ಕೆ ಕೈ ಸಂಸದರು ನಿರಂತರ ಅಡ್ಡಿಪಡಿಸುತ್ತಿದ್ದರು. ವಿಪಕ್ಷಗಳ ವಿರೋಧದ ನಡುವೆಯೂ ಮೋದಿ ಏರುಧ್ವನಿಯಲ್ಲಿ ಮಾತನಾಡಿ ತಮ್ಮ ಭಾಷಣವನ್ನು ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಅಂದ್ರೆ ವಿಭಜನೆ – ಲೋಕಸಭೆಯಲ್ಲಿ ಸಿಎಂ ಸಿದ್ದು ವಿರುದ್ಧ ಮೋದಿ ವಾಗ್ದಾಳಿ

ರೇಣುಕಾಗೆ ಟಾಂಗ್: ರಾಜ್ಯ ಸಭೆಯಲ್ಲಿ ಮೋದಿ ಭಾಷಣಕ್ಕೆ ತೀವ್ರ ರೀತಿಯಲ್ಲಿ ಅಡ್ಡಿ ಪಡಿಸಲು ನಿರ್ಧರಿಸಿದ್ದ ಕಾಂಗ್ರೆಸ್ ನಾಯಕರು ಗದ್ದಲವನ್ನು ನಿರ್ಮಿಸಿದ್ದರು. ಈ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ವಿಚಿತ್ರವಾಗಿ ನಗುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಮೋದಿ ಅವರು ತಮ್ಮ ಭಾಷಣದಲ್ಲಿ 1998 ರಲ್ಲಿ ಅಂದಿನ ಗೃಹಸಚಿವರಾಗಿದ್ದ ಎಲ್ ಕೆ ಅಡ್ವಾನಿ ಅವರು ಸಾರ್ವಜನಿಕ ಗುರುತಿನ ಚೀಟಿಯ (ಆಧಾರ್) ಪರಿಕಲ್ಪನೆ ನೀಡಿದ್ದರು ಎಂಬುದನ್ನು ಉಲ್ಲೇಖಿಸಿದರು. ಈ ಮಾತು ಕೇಳುತ್ತಿದಂತೆ ರೇಣಿಕಾ ಚೌಧರಿ ಅವರು ಜೋರಾಗಿ ನಗಲು ಆರಂಭಿಸಿದರು. ಇದನ್ನು ಕಂಡು ಕಸಿವಿಸಿಗೊಂಡ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಏನಾದರೂ ಸಮಸ್ಯೆ ಇದ್ದರೆ ವೈದ್ಯರ ನೆರವು ಪಡೆಯಲು ಸೂಚಿಸಿದ್ದರು. ಈ ವೇಳೆ ಸಭಾಪತಿಗಳನ್ನು ಮಧ್ಯದಲ್ಲೇ ತಡೆದ ಪ್ರಧಾನಿ ಮೋದಿ ಅವರು, ರೇಣುಕಾ ಚೌಧರಿ ಅವರಿಗೆ ಏನನ್ನೂ ಹೇಳಬೇಡಿ. ರಾಮಾಯಣ ಧಾರಾವಾಹಿ ನೋಡುತ್ತಿದ್ದ ಕಾಲದ ನಂತರ ಮೊದಲ ಬಾರಿಗೆ ಇಂಥ ನಗುವನ್ನು ನೋಡುವ ಅವಕಾಶ ಲಭಿಸಿದೆ ಎಂದು ವ್ಯಂಗ್ಯವಾಡಿದ್ದರು. ಮೋದಿ ಮಾತು ಕೇಳಿ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಕುಟ್ಟಿ ನಕ್ಕಿದ್ದರು. ಮೋದಿ ಅವರ ಈ ಮಾತು ಸದನದಲ್ಲಿದ್ದ ವಿರೋಧಿ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿತ್ತು.

ನಂತರ ಪ್ರಧಾನಿಗಳ ಈ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ. ಇಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ರೇಣುಕಾ ಚೌಧರಿ ಕಿಡಿಕಾರಿದ್ದರು.    ಇದನ್ನೂ ಓದಿ : ಪ್ರಧಾನಿ ಮೋದಿ ಭಾಷಣಕ್ಕೆ ಸಚಿವೆ ಉಮಾಶ್ರೀ ಆಕ್ಷೇಪ !

https://www.youtube.com/watch?v=97AkLw8FYpk

Share This Article
Leave a Comment

Leave a Reply

Your email address will not be published. Required fields are marked *