ಫೋನ್ ಕದ್ದಾಲಿಕೆ – ಶೋಭಾ ಕರಂದ್ಲಾಜೆ ಗಂಭೀರ ಆರೋಪ

Public TV
1 Min Read

ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರಾದ ಸಿದ್ದೇಶ್ವರ್, ಪಿ.ಸಿ.ಮೋಹನ್ ಹಾಗೂ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶೋಭಾ ಕರಂದ್ಲಾಜೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಫೋನ್‍ಗಳಿಗೆ ಖಾಸಗಿತನ ಇಲ್ಲ. ರಾಜ್ಯ ಸರ್ಕಾರ ತಮ್ಮ ಹಾಗೂ ಸಿದ್ದೇಶ್ವರ್, ಪಿ.ಸಿ.ಮೋಹನ್ ಫೋನ್ ಕದ್ದಾಲಿಕೆ ಮಾಡುತ್ತಿದೆ. ಈ ಕುರಿತು ಲೋಕಸಭಾ ಸ್ಪೀಕರ್, ದೇಶದ ಗೃಹ ಸಚಿವರು, ಐಜಿ, ಡಿಜಿಗೆ ಪತ್ರ ಬರೆದಿದ್ದೇವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಬಿಜೆಪಿಯಿಂದ ನಮ್ಮ ಶಾಸಕರಿಗೆ ನೂರು ಕೋಟಿ ಆಫರ್ ಕೊಟ್ಟಿದ್ದಾರೆ ಅನ್ನುವ ಕುಮಾರ ಸ್ವಾಮಿ ಹೇಳಿಕೆ ವಿಚಾರ ಪ್ರತಿಕ್ರಿಯೇ ನೀಡಿದ ಅವರು, ಕುದುರೆ ವ್ಯಾಪಾರದಲ್ಲಿ ಯಾರು ಎಕ್ಸ್ ಪರ್ಟ್ ಎನ್ನುವುದು ನಮಗೆ ಗೊತ್ತಿದೆ, ಅದು ರಾಜ್ಯದ ಜನರಿಗೂ ತಿಳಿದಿದೆ ಎಂದು ತಿರುಗೇಟು ನೀಡಿದರು. ಅಲ್ಲದೇ ರೆಸಾರ್ಟ್ ರಾಜಕೀಯದತ್ತ ಸಧ್ಯ ನಾವು ಚಿಂತನೆ ನಡೆಸಿಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *