ಅಪ್ಪ-ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಿದೆ: ಬಿಎಸ್‍ವೈ

Public TV
1 Min Read

ಮೈಸೂರು: ಕಾಂಗ್ರೆಸ್ ಮುಗಿಸಲು ಅಪ್ಪ-ಮಕ್ಕಳ ಸಂಚು ಹಾಕಿದ್ದಾರೆ ಎನ್ನುವ ಮೂಲಕ ಕಾಂಗ್ರೆಸ್ ಬಗ್ಗೆ ಮತ್ತೆ ಮೃದು ಧೋರಣೆಯನ್ನು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂಪರಪ್ಪ ತೋರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿಯೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರು ಹೇಳದೆ ಅಪ್ಪ-ಮಗ ಎಂದು ಹೇಳುತ್ತಲೇ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಹೊಂದಾಣಿಕೆ ರಾಜಕೀಯದ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ದೇವೇಗೌಡರು ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಬಲಿಯಾಗಲಿದೆ. ಕುಮಾರಸ್ವಾಮಿ ಅವರು ಬಜೆಟ್ ಮಂಡಿಸುವುದನ್ನು, ಆಡಳಿತವನ್ನು ಎರಡ್ಮೂರು ತಿಂಗಳು ಕಾದು ನೋಡೋಣ ಎಂದು ವ್ಯಂಗ್ಯವಾಡಿದರು.

ಜಯನಗರ ಕ್ಷೇತ್ರ ಹಾಗೂ ವಿಧಾನ ಪರಿಷತ್‍ನಲ್ಲಿ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಅವರು ಏದಾದರು ಮಾಡಿಕೊಳ್ಳಲಿ, ನಮ್ಮ ಪ್ರಯತ್ನ ಮಾತ್ರ ನಿಲ್ಲುವುದಿಲ್ಲ. ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ಇಂದು ಕೆಲವು ಕ್ಷೇತ್ರಗಳಿಗೆ ಭೇಟಿ ನೀಡಬೇಕಿತ್ತು. ಆದರೆ ಹವಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಪ್ರಯಾಣ ರದ್ದು ಮಾಡಿರುವೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *