ಹಲ್ಲೆ ಮಾಡಿದ್ದಕ್ಕೆ ಮನನೊಂದು ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ!

Public TV
1 Min Read

ಕಲಬುರಗಿ: ತನ್ನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ್ದಕ್ಕೆ ಮನನೊಂದು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದಲ್ಲಿ ನಡೆದಿದೆ.

ಭೀಮರಾಯ್ ಆತ್ಮಹತ್ಯೆ ಮಾಡಿಕೊಂಡ ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಇವರು ಮೂಲತಃ ಗೊಬ್ಬುರು ಗ್ರಾಮದ ನಿವಾಸಿ. ಕಳೆದ ವಿಧಾನಸಭಾ ಫಲಿತಾಂಶ ಹೊರಬಿದ್ದ ನಂತರ ಗ್ರಾಮದಲ್ಲಿ ನಡೆದ ವಿಜಯೋತ್ಸವ ಸಮಾರಂಭ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ಹೂಗಾರ ಗುತ್ತೇದಾರ್ ಎಂಬವರ ಮೇಲೆ ಹಲ್ಲೆ ನಡೆದಿತ್ತು.

ಈ ಸಂಬಂಧ ಮೂರು ದಿನಗಳ ಹಿಂದೆ ಹೂಗಾರ್ ಮನೆಯವರು ಭೀಮರಾಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದರು. ತನ್ನ ಕುಟುಂಬದವರ ಮೇಲೆ ಬಿಜೆಪಿಯವರು ಹಲ್ಲೆ ಮಾಡಿದ್ದರಿಂದ ಮನನೊಂದು ಭೀಮರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧವಾಗಿ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *