ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲೇ ಬಡಿದಾಡಿಕೊಂಡ ಕಾರ್ಯಕರ್ತರು

Public TV
1 Min Read

ಕೋಲಾರ: ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ (Congress Office) ಮಾರಾಮಾರಿ ನಡೆದಿದ್ದು ಎರಡು ಗುಂಪಿನ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡ ಘಟನೆ ಕೋಲಾರದಲ್ಲಿ (Kolara) ನಡೆದಿದೆ.

ಡಿಸಿಸಿ ಬ್ಯಾಂಕ್ ಪಕ್ಕದಲ್ಲಿರುವ ಕಾಂಗ್ರೆಸ್ ‌ಕಚೇರಿಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ (Kottur Manjunath) ಬೆಂಬಲಿಗರು ಮತ್ತು ಕೆ.ಎಚ್.ಮುನಿಯಪ್ಪ (KH Muniyappa) ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.  ಇದನ್ನೂ ಓದಿ: ಸ್ಕೈವಾಕ್‌ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ

 

ಇಂದು ಕಾಂಗ್ರೆಸ್‌ ಕಚೇರಿಯಲ್ಲಿ ಬೂತ್‌ ಮಟ್ಟದ ಏಜೆಂಟರ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಜಿಲ್ಲಾ ಕಾಂಗ್ರೆಸ್‌‌ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ ಮೇಲೆ ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರು ಏಕಾಏಕಿ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ.  ಇದನ್ನೂ ಓದಿ: ನಟನೆ ಬಿಟ್ಟು ಹೊಸ ಕೆಲಸ ಒಪ್ಪಿಕೊಂಡ ಸಮಂತಾ

ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಎರಡು ಗುಂಪುಗಳ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ. ಗಲಾಟೆ ಹೆಚ್ಚಾಗುತ್ತಿದ್ದಂತೆ ಸಭೆಯಿಂದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಹೊರ ನಡೆದಿದ್ದಾರೆ.

 

Share This Article