ಚಿಕ್ಕೋಡಿ: ದೇವರ ದರ್ಶನ ಪಡೆದುಕೊಂಡು ಮರಳುವಾಗ ಕಂಟೇನರ್ ಹಾಗೂ ಕ್ರೂಸರ್ ವಾಹನಗಳ ನಡುವೆ ಅಪಘಾತ (Accident) ಸಂಭವಿಸಿದ ಪರಿಣಾಮ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ಬಳಿ ನಡೆದಿದೆ.
ವಿಜಯಪುರ ಸಿಂದಗಿ ತಾಲೂಕಿನ ಚಿಕ್ಕ ಯರಗಲ್ಲ (ಕೇಡಿ) ಗ್ರಾಮಸ್ಥರ ಕ್ರೂಸರ್ ವಾಹನಕ್ಕೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ದೇವಕಿ ನಿಂಗಣ್ಣ ಕೀಚಡಿ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ವೇಳೆ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಆರೋಪಿಯನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದ ಪೊಲೀಸ್ನ ಕಿವಿ ಕಚ್ಚಿದ
ಗಂಭೀರವಾಗಿ ಗಾಯಗೊಂಡ ಗಾಯಾಳಯಗಳನ್ನು ನೆರೆಯ ರಾಜ್ಯ ಮಹಾರಾಷ್ಟ್ರ ಮೀರಜ್ ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂಳಿದ ಗಾಯಾಳುಗಳಿಗೆ ಅಥಣಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಯಭಾಗ ತಾಲೂಕಿನ ಸುಪ್ರಸಿದ್ಧ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದುಕೊಂಡು ಮರುಳುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ: ಸುಧಾಕರ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k