ಯಾದಗಿರಿ: ಜಿಲ್ಲೆಯಲ್ಲಿ ಸರ್ಕಾರದ ಜೋಳ ಹಾಗೂ ಬಡಮಕ್ಕಳ ಪೌಷ್ಟಿಕತೆ ಹೆಚ್ಚಿಸುವ ಕ್ಷೀರಭಾಗ್ಯ ಯೋಜನೆಯ, ಅವಧಿ ಮೀರಿದ ನಂದಿನಿ ಹಾಲಿನ ಪೌಡರ್ಗಳ ಪ್ಯಾಕೆಟ್ಗಳನ್ನೂ ವಿದೇಶಕ್ಕೆ ಮಾರಾಟ ಮಾಡುವ ಜಾಲ ಪತ್ತೆಯಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ನ ಲಕ್ಷ್ಮೀ ತಿಮ್ಮಪ್ಪ ಹತ್ತಿ ಮಿಲ್ನಲ್ಲಿ ಅಕ್ರಮ ಬಯಲಾಗಿದೆ. ಪಡಿತರ ಅಕ್ಕಿ ಇದೆ ಎಂದು ದಾಳಿ ಮಾಡಿ ಪರಿಶೀಲನೆ ಮಾಡಿದಾಗ ಮತ್ತಷ್ಟು ದಂಧೆ ಬಯಲಾಗಿದೆ.ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?: ಶಾಸಕ ಮಂಜುನಾಥ ಭಂಡಾರಿ
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಟನ್ಗಟ್ಟಲೇ ಪಡಿತರ ಅಕ್ಕಿ ದಾಸ್ತಾನು ಜಪ್ತಿ ಮಾಡಲು ತೆರಳಿದ್ದ ತಂಡ ಅಕ್ಕಿ ಜೊತೆಗೆ ಜೋಳ ಹಾಗೂ ಹಾಲಿನ ಪೌಡರ್ನ ಚೀಲಗಳನ್ನೂ ಕಂಡು ಶಾಕ್ ಆಗಿದೆ.
ಅಕ್ಕಿ ದಾಸ್ತಾನು ಜಪ್ತಿಯ ವೇಳೆ, ಗೋದಾಮಿನ ಮತ್ತೊಂದು ಭಾಗದಲ್ಲಿ ಸರ್ಕಾರಿ ಜೋಳ ಹಾಗೂ ನವೆಂಬರ್ 2024ರಲ್ಲೇ ಅವಧಿ ಮೀರಿದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ದಾಸ್ತಾನು ಸಿಕ್ಕಿದೆ. 200 ಕ್ವಿಂಟಾಲ್ನಷ್ಟು ಜೋಳದ ಚೀಲಗಳು ಹಾಗೂ 300 ಕೇಜಿಗೂ ಹೆಚ್ಚು ಹಾಲಿನ ಪೌಡರ್ ಅಂದಾಜು 20 ಚೀಲ ಗೋಧಿ ಪತ್ತೆಯಾಗಿದೆ.ಇದನ್ನೂ ಓದಿ: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್ಗೆ 10 ವರ್ಷ ಜೈಲು – ತೆಲಂಗಾಣ ಕೋರ್ಟ್ ಆದೇಶ