ಡಿಸಿಎಂ, ಪೊಲೀಸ್ ಆಯುಕ್ತರ ಮಧ್ಯೆ ಜಟಾಪಟಿ

Public TV
1 Min Read

ಬೆಂಗಳೂರು: ಕೊರೊನಾ ವಿಚಾರಕ್ಕೆ ಕರೆದ ಸಭೆಯ ಬಳಿಕ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಧ್ಯೆ ಜಟಾಪಟಿ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಕೊರೊನಾಗೆ ಕರ್ನಾಟಕ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿಸಿಗಳ ಜೊತೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲೆಗಳ ಪರಿಸ್ಥಿತಿ ತಿಳಿಯಲು ಡಿಸಿಗಳ ಜೊತೆ ಸಿಎಂ ಯಡಿಯೂರಪ್ಪ ಮೂಲಕ ಸಭೆ ನಡೆಸಿದ್ದು, ಸಚಿವರಾದ ಅಶೋಕ್, ಬೊಮ್ಮಾಯಿ, ಸುರೇಶ್ ಕುಮಾರ್, ಸುಧಾಕರ್, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಈ ಸಭೆಯ ಬಳಿಕ ಅನ್ ಲೈನ್ ಫುಡ್ ಡೆಲಿವರಿ, ಸಿಬ್ಬಂದಿಗೆ ಪಾಸ್ ನೀಡಬೇಕೆಂದು ಡಿಸಿಎಂ ಅಶ್ವಥ್ ನಾರಾಯಣ ಆಗ್ರಹಿಸಿದ್ದಾರೆ. ಈ ವೇಳೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೇಡ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಇಬ್ಬರ ಮಧ್ಯೆ ಜಟಾಪಟಿ ನಡೆದಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

ಕೆಲ ಅಂಗಡಿಗಳನ್ನು ಓಪನ್ ಮಾಡಿಸಿದ್ದೀರಿ. ಆ ಅಂಗಡಿ ಮಾಲೀಕರಿಂದ ಹಣ ಪಡೆದು ಸೂಪರ್ ಮಾರ್ಕೆಟ್ ತೆರೆಯಲು ಅನುಮತಿ ನೀಡಿದ್ದೀರಿ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಆರೋಪ ಮಾಡಿದ್ದಾರೆ. ಅಶ್ವಥ್ ನಾರಾಯಣ್ ಆರೋಪಕ್ಕೆ ಭಾಸಸ್ಕರ್ ರಾವ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದೀರಿ. ನನಗೆ ಪೊಲೀಸ್ ಆಯುಕ್ತ ಹುದ್ದೆಯೇ ಬೇಡ ಎಂದು ಹೇಳಿ ಬೇಸರ ವ್ಯಕ್ತಪಡಿಸಿ ಸಭೆಯಿಂದ ಹೊರ ನಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *