ಕೊರೊನಾ ಭೀತಿ- ದಕ್ಷಿಣ ಕನ್ನಡದ ಎಲ್ಲ ಪುಣ್ಯ ಕ್ಷೇತ್ರಗಳ ಸೇವೆ ಬಂದ್

Public TV
1 Min Read

ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ದೇವಸ್ಥಾನಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತ್ರತ್ವದಲ್ಲಿ ನಡೆದ ಸಭೆಯ ನಂತರ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ಈ ಮಾಹಿತಿ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ಎಲ್ಲ ದೇವಸ್ಥಾನಗಳಲ್ಲಿಯೂ ಭಕ್ತರಿಗೆ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸೇವೆಗಳಿಗೆ ತಡೆ ನೀಡಲಾಗಿದೆ ಎಂದು ತಿಳಿಸಿದರು.

ದೇವಸ್ಥಾನಗಳ ಉತ್ಸವಗಳಲ್ಲಿ ಸಿಬ್ಬಂದಿ ಭಾಗವಹಿಸಲು ಮಾತ್ರ ಅವಕಾಶವಿರುತ್ತದೆ. ಜನದಟ್ಟಣೆಯನ್ನು ತಪ್ಪಿಸುವುದಕ್ಕೆ ಇಂದಿನಿಂದ ಎಲ್ಲ ಸೇವೆಗಳನ್ನು ರದ್ದುಪಡಿಸಲಾಗುವುದು. ಮೊನ್ನೆ ಕುಕ್ಕೆಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆಯಂತಹ ಸೇವೆಗಳಿಗೆ ಕುಟುಂಬ ಸದಸ್ಯರ ಬದಲು ತಲಾ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ಉಳಿದಂತೆ ಎಲ್ಲ ಸೇವೆಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ ಎಂದು ಎಡಿಸಿ ರೂಪ ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *