ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆಗೆ ಇಬ್ಬರೇ ಬನ್ನಿ- ಇತ್ತ ತಲಕಾವೇರಿಯಲ್ಲಿ ಭಕ್ತರ ಸಂಖ್ಯೆ ಇಳಿಕೆ

Public TV
1 Min Read

ಮಂಗಳೂರು/ಮಡಿಕೇರಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪವಿತ್ರ ಪುಣ್ಯಕ್ಷೇತ್ರವಾಗಿರೋ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ತಲಾ ಇಬ್ಬರಂತೆ ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ.

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ದೇವಸ್ಥಾನದ ಆಡಳಿತ ಮಂಡಳಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಸರ್ಪ ಸಂಸ್ಕಾರ, ಆಶ್ಲೇಷಾ ಬಲಿ ಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳಲ್ಲಿ ಇಷ್ಟು ದಿನ ಕುಟುಂಬ ಸದಸ್ಯರು ಪಾಲ್ಗೊಳ್ಳುತ್ತಿದ್ದರು. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಲಾ ಇಬ್ಬರಂತೆ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಕೊರೊನಾ ವೈರಸ್ ಭೀತಿಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಆದರೆ ಹೊರ ರಾಜ್ಯದಿಂದ ಬರುವ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ತಲಕಾವೇರಿಯಲ್ಲಿ ಭಕ್ತರಿಲ್ಲ: ಕನ್ನಡ ನಾಡಿನ ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಗೂ ತಟ್ಟಿದ ಕೊರೋನಾ ವೈರಸ್ ಎಫೆಕ್ಟ್ ತಾಗಿದೆ. ದೇವಾಲಯದಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಬೆಳಗ್ಗೆಯಿಂದಲೂ ಧಾರ್ಮಿಕ ಕೇಂದ್ರವಾದ ತಲಕಾವೇರಿ ಭಾಗಮಂಡಲ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ವಿರಳವಾಗಿದೆ. ಅಷ್ಟೇ ಅಲ್ಲದೇ ತಲಕಾವೇರಿ ಯ ಬ್ರಹ್ಮಗಿರಿ ಬೆಟ್ಟಕ್ಕೂ ನಿಷೇಧ ಹೇರಲಾಗಿದೆ.

ಭಕ್ತರ ಸಂಖ್ಯೆ ಇಳಿಮುಖದ ಹಿನ್ನೆಲೆಯಲ್ಲಿ ಕೆಲವು ಬೀದಿ ಬದಿಯ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಹೀಗಾಗಿ ತಲಕಾವೇರಿ ಭಾಗಮಂಡಲ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಹಿಂದೆದೂ ಈ ರೀತಿಯಲ್ಲಿ ಜನ ಸಂಖ್ಯೆ ವಿರಳವಾಗಿರುವುದು ನೋಡಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *