ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

Public TV
1 Min Read

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಬಂದ್ ಮಾಡಿದರೇ ಮದ್ಯ ವ್ಯಸನಿಗಳ ಕುಟುಂಬಸ್ಥರು ನೆಮ್ಮದಿಯಿಂದ ಇರುತ್ತಾರೆ. ಆದ್ದರಿಂದ ಸರ್ಕಾರ ಹೇಗೋ ಕಳೆದ ಒಂದು ತಿಂಗಳಿನಿಂದ ಮದ್ಯದ ಮೇಲೆ ನಿರ್ಬಂಧ ವಿಧಿಸಿದೆ. ಇದನ್ನು ಹೀಗೆ ಮುಂದುವರಿಸುವಂತೆ ರೈತ ಮುಖಂಡರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಮದ್ಯ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಈ ಮದ್ಯೆ ರೈತ ಮುಖಂಡರು ಶಾಶ್ವತವಾಗಿ ಮದ್ಯ ನಿಷೇಧಿಸಿ ಎಂದು ಮನವಿ ಸಲ್ಲಿಸಿರುವುದು ಎಣ್ಣೆ ಪ್ರಿಯರ ಕೆಂಗಣ್ಣಿಗೆ ಕಾರಣವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *