ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ಸುಳ್ಳು- ಅಧ್ಯಕ್ಷರ ಸ್ಪಷ್ಟನೆ

Public TV
1 Min Read

ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಹುಸ್ಕೂರು ಪಂಚಾಯ್ತಿ ವ್ಯಾಪ್ತಿಯ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕೆಲ ಸದಸ್ಯರು ಆರೋಪ ಮಾಡಿದ್ದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಪಂಚಾಯ್ತಿ ಅಧ್ಯಕ್ಷ ಸೋಮಶೇಖರ್, ಪಂಚಾಯ್ತಿ ಕಾಮಗಾರಿಯ ಬಿಲ್ ನಲ್ಲಿ ಅವ್ಯವಹಾರ ಆರೋಪ ನಿರಾಧಾರ. ನಾನು ಯಾವುದೇ ಅವ್ಯವಹಾರ ಮಾಡಿಲ್ಲ. ರಾಜಕೀಯ ಪ್ರೇರಿತ ಹುನ್ನಾರದಿಂದ ನನ್ನ ಮೇಲೆ ಆರೋಪ ಮಾಡಲಾಗಿದೆ. ಆರೋಪ ಸಾಬೀತಾದರೆ ಪಂಚಾಯ್ತಿಯಿಂದ ಹೊರನಡೆಯುವೆ ಎಂದಿದ್ದಾರೆ.

ನನ್ನ ಅಭಿವೃದ್ಧಿ ಕೆಲಸಗಳನ್ನ ಸಹಿಸಲಾಗದೆ ರಾಜಕೀಯ ಪ್ರೇರಿತವಾಗಿ ಇಲ್ಲಸಲ್ಲದ ಆರೋಪಗಳನ್ನ ಮಾಡಿ ಹುನ್ನಾರ ನಡೆಸುತ್ತಿದ್ದಾರೆ. ಸದಸ್ಯ ಲೋಕೇಶ್ ಮಾಡಿರುವ ಆರೋಪಗಳು ಸುಳ್ಳು ಎಂದು ತಿಳಿಸಿದ್ದಾರೆ.

ಅಲ್ಲದೆ ಪಂಚಾಯಿತಿ ಅಧ್ಯಕ್ಷನಾದ ದಿನದಿಂದ ಜನರಿಗೆ ಅಗತ್ಯವಿರುವ ಸಮಾಜಮುಖಿ ಕಾರ್ಯಗಳು, ಮೂಲಭೂತ ಸೌಕರ್ಯಗಳನ್ನ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಡುತಿದ್ದು, ಪಂಚಾಯ್ತಿಯ ಎಲ್ಲ ಸದಸ್ಯರು ಸಾಮರಸ್ಯದಿಂದ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಹೀಗಾಗಿ ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ನನ್ನ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *