ಹೊಸ ವರ್ಷದಂದೇ ನಡುರಸ್ತೆಯಲ್ಲಿ ಹೊತ್ತಿ ಉರಿದ ಹತ್ತಿ ತುಂಬಿದ ಲಾರಿ!

Public TV
0 Min Read

ರಾಯಚೂರು: ಎಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ರೆ ಕೊಪ್ಪಳದ ಮುನಿರಾಬಾದ್ -ಹೊಸಪೇಟೆ ಮಧ್ಯದ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಭಸ್ಮವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಯಚೂರಿನಿಂದ ದಾವಣಗೆರೆ ಮಾರ್ಗದಲ್ಲಿ ಹೊರಟಿದ್ದ ಹತ್ತಿ ತುಂಬಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಲಾರಿ ವೇಗವಾಗಿ ಚಲಿಸುತ್ತಿದ್ದರಿಂದ ಬೆಂಕಿ ಎಲ್ಲೆಡೆ ಹಬ್ಬಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಡುರಸ್ತೆಯಲ್ಲೆ ಲಾರಿ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ಥವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *