ಬೆಳ್ಳಂಬೆಳಗ್ಗೆ ದಂಪತಿಯ ಬರ್ಬರ ಹತ್ಯೆ- ಬೆಚ್ಚಿಬಿದ್ದ ಹತ್ತಿಮತ್ತೂರು ಗ್ರಾಮಸ್ಥರು!

Public TV
1 Min Read

ಹಾವೇರಿ: ದುಷ್ಕಮಿಗಳು ಬೆಳ್ಳಂಬೆಳಗ್ಗೆ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ನಡೆದಿದೆ.

40 ವರ್ಷದ ಮಾರ್ತಾಡಪ್ಪ ಅಂಬಿಗೇರೆ ಹಾಗೂ 26 ವರ್ಷದ ಸುಧಾ ಅಂಬಿಗೇರೆ ಕೊಲೆಯಾಗಿರುವ ದುರ್ದೈವಿಗಳು. ದುಷ್ಕರ್ಮಿಗಳು ಬೆಳಗಿನ ಜಾವ ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪಾರಾರಿಯಾಗಿದ್ದಾರೆ.

ಕೊಲೆಗೆ ಕಾರಣವೇನು? ಯಾರು ಕೊಲೆ ಮಾಡಿದ್ದಾರೆ? ಎಂಬ ಯಾವುದೇ ನಿಖರ ಮಾಹಿತಿ ಇನ್ನೂ ತಿಳಿದು ಬಂದಿಲ್ಲ. ಒಟ್ಟಿನಲ್ಲಿ ಜೋಡಿ ಕೊಲೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ ಹಾಗೂ ಗ್ರಾಮದಲ್ಲಿ ಎಲ್ಲೆಡೆ ಭಯದ ವಾತಾವರಣ ಸೃಷ್ಟಿಯಾಗಿದೆ.

ಘಟನೆಯಿಂದಾಗಿ ದಂಪತಿಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಲ್ಮೆಟ್ ಹಾಗೂ ಬುರ್ಖಾ ಹಾಕಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಲಕ್ಷ್ಮೀಗಣೇಶ ಭೇಟಿ ನೀಡಿದ್ದಾರೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *