ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಕೊಂದು ಪರಾರಿಯಾದ

Public TV
1 Min Read

ಗದಗ: ಕುಟುಂಬ ಕಲಹದಿಂದಾಗಿ ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗ ತಾಲ್ಲೂಕಿನ ಮದಗಾನೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಂಕ್ರವ್ವ ಪೂಜಾರ(23) ಮೃತ ದುರ್ದೈವಿ. ಆರೋಪಿ ಈಶ್ವರಪ್ಪ ಪೂಜಾರ(40) ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈಶ್ವರಪ್ಪ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರ ಮೂಲದವನಾಗಿದ್ದು, ಒಂದು ವಾರದ ಹಿಂದೆ ದಂಪತಿ ನಡುವೆ ಜಗಳ ನಡೆದಿತ್ತು. ಇದೇ ಕಾರಣಕ್ಕೆ ಪತ್ನಿ ಶಂಕ್ರವ್ವ ಪತಿ ಬಿಟ್ಟು ತವರು ಮನೆಗೆ ಬಂದಿದ್ದಳು. ಇದೆಲ್ಲ ಘಟನೆ ನಡೆದ ನಂತರ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯಿತಿ ಮಾಡುವ ಮೂಲಕ ಸರಿಪಡಿಸಲಾಗಿತ್ತು. ಆದರೂ ದ್ವೇಷ ಬಿಡದ ಪತಿ, ತವರು ಮನೆಯಲ್ಲಿದ್ದ ಪತ್ನಿಯನ್ನು ಹುಡುಕಿಕೊಂಡು ಬಂದಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಶ್ವರಪ್ಪ ಪತ್ನಿಯನ್ನು ಕೊಲೆಗೈದು ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *